ಹೆಸರಿಗಷ್ಟೇ ಅಂತಾರಾಜ್ಯ ಹೆದ್ದಾರಿ: ಇದು ಗುಂಡಿಗಳದ್ದೇ ದಾರಿ

https://www.opticworld.net/

ಈ ರಸ್ತೆಯನ್ನು ಹೆಸರಿಗಷ್ಟೇ ಅಂತಾರಾಜ್ಯ ಹೆದ್ದಾರಿ ಎನ್ನಬಹುದು. ಆದರೆ ಇಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ. ಕಲ್ಲಡ್ಕ ಕಾಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಕಲ್ಲಡ್ಕದಿಂದ ಗೋಳ್ತಮಜಲುವರೆಗಿನ ಭಾಗ ಸಂಪೂರ್ಣ ಹದಗೆಟ್ಟಿದ್ದು ಹೊಂಡಗಳಿಂದ ಕೂಡಿದೆ.ಕಲ್ಲಡ್ಕದಿಂದ ವಿಟ್ಲ ಮೂಲಕ ಕೇರಳದ ಕಾಞಂಗಾಡ್ ತಲುಪುವ ಹೆದ್ದಾರಿಯಲ್ಲಿ ವಾಹನ ಸವಾರರು ಸಂಚರಿಸಲು ಹಿಂದೇಟು ಹಾಕುವಂಥ ಪರಿಸ್ಥಿತಿ ಇದೆ.

ಈಗಾಗಲೇ ಮಂಗಳೂರಿನಿಂದ ವಿಟ್ಲಕ್ಕೆ ಸಾಗುವ ಮಾರ್ಗದಲ್ಲಿ ಮೆಲ್ಕಾರ್ ನಿಂದ ಕಲ್ಲಡ್ಕದವರೆಗೆ ಚತುಷ್ಪಥ ನಿರ್ಮಾಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಹದಗೆಟ್ಟಿದೆ. ಆದರೆ ಯಾವುದೇ ಸಮಸ್ಯೆ ಇರದಿದ್ದ ಕಲ್ಲಡ್ಕ ವಿಟ್ಲ ರಸ್ತೆಯಲ್ಲೂ ಹೊಂಡ ಗುಂಡಿಗಳು ತುಂಬಿವೆ. ಅದರಲ್ಲೂ ಕಲ್ಲಡ್ಕ ಪೇಟೆಯಿಂದ ಮುಂದಕ್ಕೆ ಸಾಗುವಾಗ ಗೋಳ್ತಮಜಲುವರೆಗಿನ ರಸ್ತೆ ಸಂಪೂರ್ಣ ನಾಶವಾಗಿದೆ. ಸಂಬಂಧಪಟ್ಟವರು ಈ ಕುರಿತು ಗಮನಹರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹೆಸರಿಗಷ್ಟೇ ಅಂತಾರಾಜ್ಯ ಹೆದ್ದಾರಿ: ಇದು ಗುಂಡಿಗಳದ್ದೇ ದಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*