ಬಂಟ್ವಾಳ

ರಸ್ತೆ ಬದಿ ಕಸ ಎಸೆಯುವ ಚಾಳಿ ಮುಂದುವರಿಸಿದರೆ ದಂಡ ವಿಧಿಸಿ: ಜಿಪಂ ಉಪಕಾರ್ಯದರ್ಶಿ

ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯದಂತೆ ಜನತೆಯಲ್ಲಿ ಅರಿವು ಮೂಡಿಸಿದರೂ ಅದಕ್ಕೆ ಜನರು ಸ್ಪಂದಿಸದೇ ಇದ್ದಲ್ಲಿ, ಅಂಥ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ, ಕಸ ಎಸೆಯುವವರನ್ನು ಪತ್ತೆಹಚ್ಚಿ ದಂಡ ವಿಧಿಸಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ ನೋಡೆಲ್ ಆಗಿರುವ ಜಯಲಕ್ಷ್ಮೀ ರಾಯಕೋಡ್ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬಂಟ್ವಾಳ ಪುರಸಭೆ ಮತ್ತು ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ 14 ಗ್ರಾಮ ಪಂಚಾಯಿತಿಗಳ ರಸ್ತೆ ಬದಿಯಲ್ಲಿ ಹಸಿ ಮತ್ತು ಒಣತ್ಯಾಜ್ಯ ವಿಲೇವಾರಿ ಕುರಿತು ಸಭೆ ನಡೆಸಿ ಅಧಿಕಾರಿಗಳು ಹಾಗೂ ಸ್ಥಳೀಯಾಡಳಿತ ಗಳ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಬಂಟ್ವಾಳ ಪುರಸಭೆ ಸುತ್ತಮುತ್ತಲೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಜನರು ಕಸ ತಂದು ಪುರಾಸಭಾ ವ್ಯಾಪ್ತಿಗೆ ತಂದು ಎಸೆಯುತ್ತಿರುವುದರಿಂದ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಪಂಚಾಯತ್ ಗಳು ಈಗಾಗಲೇ ಒಣ ಕಸವನ್ನು ಸಂಗ್ರಹ ಮಾಡುತ್ತಿದೆ. ಅದೇ ರೀತಿ ಹಸಿ ಕಸವನ್ನು ಸಂಗ್ರಹಿಸಿ, ಅದನ್ನು ಪುರಸಭೆಯ ವಾಹನಗಳಿಗೆ ನೀಡುವ ಕುರಿತು ಯೋಚನೆ ಮಾಡಬಹುದು. ಈ ಕುರಿತು ಪುರಸಭೆಯ ಕೌನ್ಸಿಲ್ ನಿರ್ಣಯ ತೆಗೆದುಕೊಂಡರೆ, ಪಂಚಾಯಿತಿಗಳಿಂದ ಹಸಿ ಕಸವನ್ನು ತೆಗೆದುಕೊಳ್ಳಲು ಅವಕಾಶವಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಹಸಿ ಮತ್ತು ಒಣ ಕಸ ವಿಲೇವಾರಿಗೆ ಅಭಿಯಾನ ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಯಿತು.

ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಮಾತನಾಡಿ, ಪುರಸಭೆಯ ಪಾಣೆಮಂಗಳೂರು ಗಡಿ ಪ್ರದೇಶದಲ್ಲಿ ಸಜೀಪಮುನ್ನೂರು ಗ್ರಾಮ ಪಂಚಾಯಿತಿ ಭಾಗದಿಂದ ಕಸ ತಂದು ಹಾಕುತ್ತಿರುವ ಕುರಿತು ಪುರಸಭೆಯಿಂದ 1 ಲಕ್ಷ ರೂ ಅನುದಾನ ಮೀಸಲಿಟ್ಟು, ಬೇಲಿ ಹಾಗೂ ಸಿಸಿ ಕ್ಯಾಮರಾ ಹಾಕುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕರುಣಾಕರ, ನರಿಕೊಂಬು, ಸಜೀಪಮುನ್ನೂರು, ಕಳ್ಳಿಗೆ, ಅಮ್ಟಾಡಿ, ಗೋಳ್ತಮಜಲು, ಬಾಳ್ತಿಲ, ವೀರಕಂಭ, ವಿಟ್ಲಪಡ್ನೂರು, ಅಳಿಕೆ, ಕೇಪು, ವಿಟ್ಲಮುಡ್ನೂರು, ಇಡ್ಕಿದು, ಅನಂತಾಡಿ, ನಾವೂರು, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago