ಬಂಟ್ವಾಳ: ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ನಡೆಯಲಿರುವ ಅತಿಮಹಾರುದ್ರ ಯಾಗದ ಚಪ್ಪರ ಮಹೂರ್ತ ಕಾರ್ಯಕ್ರಮ ಸೋಮವಾರ ನೆರವೇರಿತು. ಪ್ರಮುಖರಾದ ಯಾಗ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ರಘುನಾಥ ಸೋಮಯಾಜಿ, ಪದ್ಮನಾಭ ರೈ, ಕೃಷ್ಣಪ್ಪ ಪೂಜಾರಿ ದೋಟ, ಪ್ರದೀಪ್ ಕುಮಾರ್ ಕಲ್ಕೂರ, ರಾಜಾ ಬಂಟ್ವಾಳ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಕಲ್ಲಡ್ಕ ಮೊಗರನಾಡು ಸಾವಿರ ಸೀಮೆ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2,3,4 ರಂದು ಅನಂತ್ ಭಟ್ ಓಣಿಬೈಲು ನೇತೃತ್ವದಲ್ಲಿ ಅತಿಮಹಾರುದ್ರ ಯಾಗ ನಡೆಯಲಿದೆ. ರಾಷ್ಟ್ರ ರಾಜ್ಯ ಮಟ್ಟದ ಪ್ರಮುಖರು ಯಾಗದಲ್ಲಿ ಭಾಗವಹಿಸುವರು. ವಾರಾಣಾಸಿ ಕಾಶಿಮಠ ಶ್ರೀಮದ್ ಕಾಶಿಜ್ಞಾನ ಸಿಂಹಾಸನಾದೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ಈ ಯಾಗ ನಡೆಯಲಿದೆ. ಚಿತ್ರದುರ್ಗದ ಬಹ್ಮಾನಂದ ರೆಡ್ಡಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸುಮಾರು ಐದು ಕೋಟಿ ರೂ. ವೆಚ್ಚದಲ್ಲಿ ಈ ಯಾಗ ನಡೆಯಲಿದೆ.. 400 ಮಂದಿ ಋತ್ವಿಜರು, 14,641 ಸಂಖ್ಯೆಯಲ್ಲಿ ರುದ್ರ ಪಠಣ ಮಾಡಿ 11 ಕುಂಡಗಳಲ್ಲಿ ಹವಿಸ್ಸು ಸಮರ್ಪಣೆ ನಡೆಸುವ ಮೂಲಕ ಯಾಗ. ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವೈದಿಕರಿಂದ ನಿತ್ಯ ರುದ್ರ ಪಾರಾಯಣ ಅನ್ನದಾನ ನಡೆಯುತ್ತಿದೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…