ಬಂಟ್ವಾಳ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ವೈಭವದ ಮಹಾರಥೋತ್ಸವ ಸಂಪನ್ನ

ಸಾವಿರ ಸೀಮೆಯ ಒಡತಿ ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ದೇವಸ್ಥಾನದ ಸುದೀರ್ಘ ಒಂದು ತಿಂಗಳ ಕಾಲದ ವಾರ್ಷಿಕ ಜಾತ್ರೆಯ ನಿಮಿತ್ತ ವೈಭವದ ಮಹಾರಥೋತ್ಸವ ಗುರುವಾರ ಸಂಜೆ ನಡೆಯಿತು. ಭಕ್ತರ ಜಯಘೋಷದ ನಡುವೆ ರಥೋತ್ಸವ ಸಂಪನ್ನಗೊಂಡಿತು. ಏ.9ರಂದು ಕಡೇ ಚೆಂಡಿನ ಉತ್ಸವದ ಬಳಿಕ ಗುರುವಾರ ರಥೋತ್ಸವ ನಡೆಯುತ್ತದೆ. ಈ ಸಂದರ್ಭ ಸಿಡಿಮದ್ದಿನ ಪ್ರದರ್ಶನವೂ ನಡೆಯಿತು. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ದೇವಸ್ಥಾನದ ಸುದೀರ್ಘ ಒಂದು ತಿಂಗಳ ವಾರ್ಷಿಕ ಜಾತ್ರೆಯ ಪ್ರಮುಖ ಘಟ್ಟವಾದ ಮಹಾರಥೋತ್ಸವ ವೀಕ್ಷಿಸಲು ಗುರುವಾರ ಸಂಜೆ ಸಹಸ್ರಾರು ಮಂದಿ ಸೇರಿದ್ದರು.

ಪೊಳಲಿ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದಜಿ, ಶಾಸಕ ರಾಜೇಶ್ ನ್ಯಾಕ್ ಉಳಿಪಾಡಿಗುತ್ತು, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. ಅನುವಂಶಿಕ ಆಡಳಿತ ಮೊಕೇಸರ ಅಮ್ಮುಂಜೆಗುತ್ತು ಡಾ| ಮಂಜಯ್ಯ ಶೆಟ್ಟಿ ಪವಿತ್ರಪಾಣಿ ಪಿ.ಮಾಧವ ಭಟ್, ದೇವಳದ ತಂತ್ರಿಗಳು, ಅರ್ಚಕರು, ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್. ಗುತ್ತಿನವರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ