NITILAKSHA SADASHIVA TEMPLE: ಅತಿಮಹಾರುದ್ರಯಾಗ ಹಿನ್ನೆಲೆ: ಮಹಾರುದ್ರಪಠಣ, ಪೂರ್ವಭಾವಿ ಸಭೆ

ಕಲ್ಲಡ್ಕ ಸಮೀಪ ನೆಟ್ಲದ ಶ್ರೀ ನಿಟಿಲಾಕ್ಷ ಸದಾಶಿವ ದೇವಳದಲ್ಲಿ ಅತಿಮಹಾರುದ್ರಯಾಗ ಮೇ.2ರಿಂದ 4ರವರೆಗೆ ನಡೆಯಲಿದ್ದು, ಈ ಸಂದರ್ಭ ಪ್ರತಿದಿನ ರುದ್ರಪಠಣ ನಡೆಯುತ್ತಿದ್ದು, ಭಾನುವಾರ ವಿಶೇಷವಾಗಿ 150 ವೈದಿಕರಿಂದ ಮಹಾರುದ್ರಪಠಣ ನಡೆಯಿತು.

ಜಾಹೀರಾತು

ಇದೇ ವೇಳೆ ಪೂರ್ವಭಾವಿ ಸಭೆ ನಡೆಯಿತು. ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಶ್ರೀಮದ್ ಕಾಶಿಜ್ಞಾನ ಸಂಸ್ಥಾನಾಧೀಶ್ವರ ಶ್ರೀ 1008 ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಅವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಲೋಕಕಲ್ಯಾಣಾರ್ಥವಾಗಿ ಅತೀಮಹಾರುದ್ರಯಾಗ ನಡೆಯಲಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪೂರ್ವವಾದ ಕಾರ್ಯಕ್ರಮವಾಗಿರುವ ಕಾರಣ ಇದಕ್ಕೆ ಸರ್ವರ ಸಹಕಾರ ಅಗತ್ಯವೆಂದು ಸಮಿತಿ ಗೌರವಾಧ್ಯಕ್ಷ ಬಿ.ರಘುನಾಥ ಸೋಮಯಾಜಿ ಈ ಸಂದರ್ಭ ಹೇಳಿದರು.

ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಬ್ರಹ್ಮಾನಂದ ರೆಡ್ಡಿ ಈ ಸಂದರ್ಭ ಉಪಸ್ಥಿತರಿದ್ದರು. ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಅವರು ಮಾತನಾಡಿ, ಯಾಗಕ್ಕೆ ಸಂಬಂಧಿಸಿದಂತೆ ಪೂರ್ವತಯಾರಿ ಅತ್ಯವಶ್ಯಕವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಊರ, ಪರವೂರ ಭಕ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಲೋಕಕಲ್ಯಾಣಾರ್ಥವಾಗಿ ನಡೆಯುವ ಯಾಗದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ವಿದ್ವಾನ್ ಅನಂತ ಭಟ್ ಓಣಿಬೈಲ್ ಯಾಗದ ಕುರಿತು ಮಾಹಿತಿ ನೀಡಿದರು. ಪ್ರಮುಖ ಗಣ್ಯರು ಭಕ್ತಾಭಿಮಾನಿಗಳು, ಸಂಘ ಸಂಸ್ಥೆಗಳು ಭಾಗವಹಿಸಿದ್ದರು.

ರುದ್ರಪಾರಾಯಣ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಭಾನುವಾರ ಎ. ವಿ ಸಗ್ರಿತ್ತಾಯ ನಡೆಸಿದರು ಭಾನುಶಂಕರ ಬನ್ನಿಂತಾಯ, ನೇಮೋತ್ಸವ ಸಮಿತಿ ಬೊಂಡಾಲ, ,ಶಂಕರ್ ಎನ್. ಚಿತ್ರದುರ್ಗ, ವೈಶಾಕ್ ಬೋಳಂತೂರು, ಭಾಗವಹಿಸಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "NITILAKSHA SADASHIVA TEMPLE: ಅತಿಮಹಾರುದ್ರಯಾಗ ಹಿನ್ನೆಲೆ: ಮಹಾರುದ್ರಪಠಣ, ಪೂರ್ವಭಾವಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*