ಬಂಟ್ವಾಳ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಬಿಲ್ಲವ ಸಂಘಗಳ ವಿಶೇಷ ಸಭೆ ನೇರವೇರಿತು. ರಾಯಿ ಕೊಯಿಲ ಅರಳದ ನೂತನ ನಾರಾಯಣ ಗುರುಗಳ ಜ್ಞಾನಮಂದಿರ ಹಾಗೂ ಸಮುದಾಯ ಭವನ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಶ್ರೀ ಕಾರಿಂಜೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್ ವಗ್ಗ, ಕೊಯಿಲ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಗದೀಶ್ ಕೊಯಿಲ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ರಾಘವೇಂದ್ರ ರಾಯಿ ಅವರನ್ನು ಅಭಿನಂದಿಸಲಾಯಿತು. ಬಂಟ್ವಾಳ ತಾಲೂಕು ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪ ಅಧ್ಯಕ್ಷ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಪ್ರಾಸ್ತಾವಿಕ ಮಾತನಾಡಿದರು.
ಉಪಾಧ್ಯಕ್ಷ ಭುವನೇಶ್ ಪಚಿನಡ್ಕ, ಬೂಡ ಅಧ್ಯಕ್ಷ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಲೆಕ್ಕಪರಿಶೋಧಕ ಹೇಮಂತ್ ಕುಮಾರ್ ಮೂರ್ಜೆ, ರಾಯಿ ಸಂಘದ ಪ್ರತಿಷ್ಠಾ ಮಹೋತ್ಸ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಜೆಎಸ್. ಹೊರೆಕಾಣಿಕೆ ಸಮಿತಿ ಪ್ರಧಾನ ಸಂಚಾಲಕ ಪ್ರಕಾಶ್ ಅಂಚನ್, ರಾಯಿ ಸಂಘದ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು, ತಾಲೂಕು ಸಂಘದ ಮಹಿಳಾ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು.