ಬಂಟ್ವಾಳದ ಲೋಕೋಪಯೋಗಿ ಇಲಾಖೆ ಬಂಟ್ವಾಳ ಉಪವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದು ಇದೀಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಪದೋನ್ನತಿಗೊಂಡಿರುವ ಪ್ರೀತಂ ಅವರಿಗೆ ಬೀಳ್ಕೊಡುಗೆ ಸಮಾರಂಭ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಲೋಕೋಪಯೋಗಿ ಉಪ ವಿಭಾಗ ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೈಪ್ರಕಾಶ್ ಸಿ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಪುತ್ತೂರು ಪಿಡಬ್ಲುಡಿ ಎಇಇ ರಾಜೇಶ್ ರೈ ಸುಳ್ಯ ಎಇಇ ಗೋಪಾಲ್ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಎಇಇ ತಾರಾನಾಥ ಸಾಲ್ಯಾನ್ ಉಪಸ್ಥಿತರಿದ್ದರು. ಇಂಜಿನಿಯರ್ ಅರುಣ್ ಪ್ರಕಾಶ್ ಡಿಸೋಜಾ ಸ್ವಾಗತಿಸಿ ಇಂಜಿನಿಯರ್ ದಿಲೀಪ್ ಅವರು ವಂದಿಸಿದರು ಅರುಣ್ ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು ಈ ಸಂದರ್ಭ ಕಚೇರಿ ಸಿಬ್ಬಂದಿ ಹಾಗೂ ಎಲ್ಲ ಗುತ್ತಿಗೆದಾರರು ಹಾಜರಿದ್ದರು.
Be the first to comment on "ಪದೋನ್ನತಿಗೊಂಡ ಲೋಕೋಪಯೋಗಿ ಇಂಜಿನಿಯರ್ ಅವರಿಗೆ ಬೀಳ್ಕೊಡುಗೆ"