ಕಲ್ಲಡ್ಕ

ಶಿಕ್ಷಣ ಮತ್ತು ಸಂಸ್ಕಾರದ ಮಹತ್ವ ನಾರಾಯಣಗುರುಗಳ ಸಂದೇಶದ ಸಾರ : ಜಯರಾಮ ಪೂಜಾರಿ

ಮಾನವನ ಬದುಕಿನಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಎಂಬ ಎರಡು ಅಡಿಪಾಯಗಳಿವೆ. ಶಿಕ್ಷಣವು ಬುದ್ಧಿಶಕ್ತಿಯನ್ನು ಬೆಳಸುತ್ತದೆ, ಸಂಸ್ಕಾರವು ನಡವಳಿಕೆಗೆ ಶಿಷ್ಟತೆ ಮತ್ತು ಮೌಲ್ಯಗಳನ್ನು ನೀಡುತ್ತದೆ. ನಾರಾಯಣಗುರುಗಳ ಜೀವನ ಮತ್ತು ಅವರ ಸಂದೇಶಗಳು ಇಂದು ಶಿಕ್ಷಣ ಮತ್ತು ಸಂಸ್ಕಾರದ ನಿಜವಾದ ಅರ್ಥವನ್ನು ನಮಗೆ ತಿಳಿಸುತ್ತವೆ ಎಂದು ನಿವೃತ್ತ ಜಿಲ್ಲಾ ಆರೋಗ್ಯ ನಿರೀಕ್ಷಕರಾದ ಜಯರಾಮ ಪೂಜಾರಿ ತಿಳಿಸಿದರು.

ಜಾಹೀರಾತು

ಯುವವಾಹಿನಿ ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೊಟ್ಯಾನ್ ಬೊಂಡಾಲ ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 42 ಮಾಲಿಕೆಯಲ್ಲಿ ಗುರು ಸಂದೇಶ ನೀಡಿದರು.

ಬಂಟ್ವಾಳ ತಾಲೂಕು ಯುವವಾಹಿನಿ ಘಟಕದ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪಲ್ಲಿಕಂಡ, ಮಹಿಳಾ ಸಂಘಟನ ಕಾರ್ಯದರ್ಶಿ ಹರಿಣಾಕ್ಷಿ ನವೀಶ್ ನಾವೂರು, ಮಾಜಿ ಅಧ್ಯಕ್ಷರಾದ ಶಿವಾನಂದ ಎಂ, ಅರುಣ್ ಮಹಾಕಾಳಿಬೆಟ್ಟು, ನಾಗೇಶ್ ಪೊನ್ನೊಡಿ, ರಾಮಚಂದ್ರ ಸುವರ್ಣ, ರಾಜೇಶ್ ಸುವರ್ಣ, ಪ್ರೇಮನಾಥ್ ಕರ್ಕೇರ, ವಿವೇಕಾನಂದ ಪೂಜಾರಿ , ಸದಸ್ಯರಾದ ಪ್ರಶಾಂತ್ ಏರಮಲೆ, ಯೋಗೀಶ್ ಕಲ್ಲಡ್ಕ, ಸತೀಶ್ ಬಾಯಿಲ,ನಿಕೇಶ್ ಕೊಟ್ಯಾನ್ ನಾಗೇಶ್ ಏಲಬೆ, ಯಶೋಧರ ಕಡಂಬಳಿಕೆ, ಸಚಿನ್ ಕೊಡ್ಮಾಣ್, ಜಗದೀಶ್ ಕಲ್ಲಡ್ಕ, ಚಿನ್ನಾ ಕಲ್ಲಡ್ಕ, ಭವಾನಿ ನಾರಾಯಣ, ನಾಗೇಶ್ ಎಂ ಮತ್ತಿತರರು ಉಪಸ್ಥಿತರಿದ್ದರು. ಗುರುಸಂದೇಶದ ಮೊದಲಾಗಿ ಭಜನಾ ಸಂಕೀರ್ತನೆ ನಡೆಯಿತು. ಹಾರ್ಮೋನಿಯಂ ನಲ್ಲಿ ರಾಜೇಶ್ ಅಮ್ಟೂರು ಮತ್ತು ತಬಲಾ ದಲ್ಲಿ ಸಾತ್ವಿಕ್ ದೇರಾಜೆ ಸಹಕರಿಸಿದರು. ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts