ರೈತರ ಪಂಪ್ ಸೆಟ್ ವಿದ್ಯುತ್ ಸಂಪರ್ಕಕ್ಕೆ ಅಭಿವೃದ್ಧಿ ಶುಲ್ಕದ ಹೊರೆ – ತಕ್ಷಣದಿಂದಲೇ ರದ್ದುಗೊಳಿಸಿ, ಪರಿಷ್ಕೃತ ಆದೇಶ ಹೊರಡಿಸಲು ಪ್ರಭಾಕರ ಪ್ರಭು ಮನವಿ

ಎಲ್ಲಾ ರೈತರ ನೀರಾವರಿ ಪಂಪ್ ಸೆಟ್ಟ್ ವಿದ್ಯುತ್ ಸಂಪರ್ಕ ವಿಧಿಸಿದ ಅಭಿವೃದ್ದಿ ಶುಲ್ಕವನ್ನು ತಕ್ಷಣದಿಂದಲೇ ಕೈ ಬಿಟ್ಟು ಪರಿಷ್ಕ್ರತ ಆದೇಶ ಹೊರಡಿಸುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ. ಅಧ್ಯಕ್ಷ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

ಈ ಕುರಿತು ರಾಜ್ಯ ಇಂಧನ ಸಚಿವರಿಗೆ ಅವರು ಪತ್ರ ಬರೆದಿದ್ದಾರೆ. ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೃಷಿ ಸಂಬಂಧಿತ ಬೆಳೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ನೀರಾವರಿ ಪಂಪ್ ಸೆಟ್ಟ್ ಗಳಿಗೆ ವಿದ್ಯುತ್ ಸಂಪರ್ಕ ಪಡೆಯುವರೇ ಶೀಘ್ರ ವಿದ್ಯುತ್ ಸಂಪರ್ಕ ಯೋಜನೆ ಯಡಿಯಲ್ಲಿ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಅರ್ಜಿ ಸಲ್ಲಿಸುವಾಗಲೇ ಠೇವಣಿಯೊಂದಿಗೆ ಅಭಿವೃದ್ದಿ ಶುಲ್ಕ ಹೆಸರಿನಲ್ಲಿ ರೂ.15,000 ಹೆಚ್ಚುವರಿಯಾಗಿ ಪಾವತಿಸಲು ಸರಕಾರದ ಇಂಧನ ಇಲಾಖಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರಿಂದ ರಾಜ್ಯದ ಕೃಷಿಕ ಕುಟುಂಬಗಳಿಗೆ ಮತ್ತು ರೈತರಿಗೆ ತುಂಬಾ ಹೊರೆಯಾಗಿದೆ. ರೈತರು ಸರಕಾರದ ನಿಲುವಿನ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ . ಈಗಾಗಲೇ ರಾಜ್ಯಾದಾದ್ಯಂತ ಲಕ್ಷಾಂತರ ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯಕ್ಕಾಗಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿ ಕೆಲಸ ಆದೇಶವಾಗಿದ್ದುಕೊಂಡು ವಿದ್ಯುತ್ ಸಂಪರ್ಕ ಪಡೆಯುವ ಈ ಸಂದರ್ಭ ಇಂತಹ ಆದೇಶಗಳು ರೈತರಲ್ಲಿ ದಿಗ್ಬ್ರಮೆ ಹುಟ್ಟಿಸಿದೆ . ಸರಕಾರದ ಈ ಆದೇಶದಂತೆ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೊಳಿಸುವ ಸಂಬಂಧ ಏ.15ರಂದು ಆದೇಶವಾಗಿದೆ. ಆದರೆ ಈ ಆದೇಶ 2023ರ ಸೆ.23ರ ಬಳಿಕ ನೋಂದಣಿಯಾದ ಎಲ್ಲಾ ರೈತರಿಗೂ ಸಂಬಂಧಪಡುವಂತಾಗಿದ್ದು ,ಅಂದಿನಿಂದ ನೀರಾವರಿ ವಿದ್ಯುತ್ ಸಂಪರ್ಕ ಪಡೆದಿರುವ ರೈತರು ರೂ.15000- ಅಭಿವೃದ್ದಿ ಶುಲ್ಕ ಭರಿಸಬೇಕಾಗುತ್ತದೆ . ಇದರಿಂದ ಸರಕಾರವು ಗ್ಯಾರಂಟಿ ಯೋಜನೆಗಳ ಸಂಭ್ರಮಾಚರಣೆಗಾಗಿ ರೈತರಿಂದಲೂ ಹಣ ವಸೂಲಿ ಮಾಡಿ ರೈತರ ಬೆನ್ನೆಲುಬನ್ನು ಮುರಿದಂತೆ ಆಗಿದ್ದು ,ರೈತರಿಗೆ ತುಂಬಾ ಕಷ್ಟವಾಗಿದೆ ಎಂದವರು ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರೈತರ ಪಂಪ್ ಸೆಟ್ ವಿದ್ಯುತ್ ಸಂಪರ್ಕಕ್ಕೆ ಅಭಿವೃದ್ಧಿ ಶುಲ್ಕದ ಹೊರೆ – ತಕ್ಷಣದಿಂದಲೇ ರದ್ದುಗೊಳಿಸಿ, ಪರಿಷ್ಕೃತ ಆದೇಶ ಹೊರಡಿಸಲು ಪ್ರಭಾಕರ ಪ್ರಭು ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*