ಪ್ರಮುಖ ಸುದ್ದಿಗಳು

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಚಾವಡಿ ತಮ್ಮನ

ತುಳು ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ನನ್ನ ಈ ಇಳೀ ವಯಸ್ಸಿನಲ್ಲೂ ನಾನು ತುಳು ಭಾಷೆಯ ಸಲುವಾಗಿ ಯಾವುದೇ ಹೋರಾಟ, ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಗಾಂಧಿವಾದಿ, ನಿವೃತ್ತ ಉಪನ್ಯಾಸಕ, ತುಳು ಬರಹಗಾರ ಕೆ.ಟಿ. ಆಳ್ವ ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ನೀಡಲಾದ ಚಾವಡಿ ತಮ್ಮನ ಗೌರವನ್ನು ಸ್ವೀಕರಿಸಿ ತಿಮ್ಮಣ್ಣ ಆಳ್ವರು ಮಾತನಾಡಿದರು. ತೊಂಬತ್ತೆರಡರ ವಯಸ್ಸಿನ ಕೆ.ಟಿ. ಆಳ್ವರಿಗೆ ಅಕಾಡೆಮಿಯ ಚಾವಡಿ ತಮ್ಮನ ಗೌರವವನ್ನು ಮುಡಿಪು ಪಜೀರ್‌ನ ತಿಮ್ಮಣ್ಣ ಆಳ್ವರ ನಿವಾಸದಲ್ಲಿ ಪ್ರಧಾನ ಮಾಡಲಾಯಿತು. ಮುಡಿಪು ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಬಳಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಜಾಹೀರಾತು

ತುಳು ಭಾಷೆಯ ಬಗ್ಗೆ ಜನ ಸಾಮಾನ್ಯರ ಕೈಗೆಟಕುವಂತಹ ಶಬ್ದಕೋಶವೊಂದನ್ನು ಹೊರ ತರಲು ಅಕಾಡೆಮಿ ಮುಂದಾಗಬೇಕೆಂದು ತಿಮ್ಮಣ್ಣ ಆಳ್ವರು ಅಭಿಪ್ರಾಯಪಟ್ಟರು.
ಯಾವುದೇ ಸನ್ಮಾನ, ಪುರಸ್ಕಾರವನ್ನು ಜೀವನದಲ್ಲಿ ಎಂದೂ ಬಯಸದ ನನ್ನನ್ನು ತುಳು ಅಕಾಡೆಮಿ ಚಾವಡಿ ತಮ್ಮನದ ಮೂಲಕ ಗೌರವಿಸಿರುವುದು ನನ್ನ ಯೋಗ ಭಾಗ್ಯವೆಂಬ ಕೃತಜ್ಞತೆಯ ಭಾವವನ್ನು
ಮೂಡಿಸಿದೆ ಎಂದು ಕೆ.ಟಿ. ಆಳ್ವರು ಅನಿಸಿಕೆ ಹಂಚಿಕೊಂಡರು.

ಪಜೀರ್‌ ಗ್ರಾಮ ಪಂಚಾಯತ್‌ ಅಧ್ಯಕ್ಷ ರಫೀಕ್‌ ಪಜೀರ್‌ ಅವರು ಮಾತನಾಡಿ, ಪಜೀರ್‌ ಪಂಚಾಯತಿನ ಗ್ರಂಥಾಲಯದಲ್ಲಿ ತುಳು ಭಾಷೆಯ ಪುಸ್ತಕ ವಿಭಾಗವನ್ನು ಆಂಭಿಸುವುದಾಗಿ ತಿಳಿಸಿದರು. ಪಂಚಾಯತ್ ವತಿಯಿಂದ ತುಳು ಕಾರ್ಯಕ್ರಮವನ್ನು ಆಯೋಜಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್‌ ಗಟ್ಟಿ ಕಾಪಿಕಾಡ್‌ ಅವರು ಮಾತನಾಡಿ, ತುಳುವಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಧಕರ ಮನೆಗೆ ತೆರಳಿ, ಊರವರ ಸಮ್ಮುಖದಲ್ಲಿ ಅಕಾಡೆಮಿಯ ಚಾವಡಿ ತಮ್ಮನದ ಗೌರವವನ್ನು ಅರ್ಪಿಸುವ ಕಾರ್ಯಕ್ರಮವನ್ನು ಅಕಾಡೆಮಿ ಆಯೋಜಿಸುತ್ತಿದೆ, ಆ ಮೂಲಕ ಅಕಾಡೆಮಿಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿಲು ಮುಂದಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ನಿವೃತ್ತ ಪ್ರಾಂಶುಪಾಲ ಡಾ. ಎನ್.‌ ಇಸ್ಮಾಯಿಲ್‌, ಹಿರಿಯ ಲೆಕ್ಕ ಪರಿಶೋಧಕ ಪುಂಡರಿಕಾಕ್ಷ , ಪಜೀರ್‌ ಪಂಚಾಯತ್‌ ಸದಸ್ಯರಾದ ಇಮ್ತಿಯಾಜ್‌ , ಸೀತಾರಾಮ ಶೆಟ್ಟಿ ಮುಗುಳಿ, ಭರತ್‌ ರಾಜ್‌ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಉಮೇಶ್‌ ಮೊದಲಾದವರು ಮಾತನಾಡಿದರು. ಪತ್ರಕರ್ತ ಶಶಿಧರ ಪೊಯ್ಯತ್ತಬೈಲ್‌ ಅಭಿನಂದನಾ ಭಾಷಣ ಮಾಡಿದರು.
ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ಲೇಖಕರಾದ ಚಂದ್ರಹಾಸ ಕಣಂತೂರು, ಶಶಿಧರ್‌ ಮಂಟಮೆ, ಬಾಬು ಪಿಲಾರ್‌ , ಎಡ್ವರ್ಡ್‌ ತೊಕ್ಕೊಟ್ಟು , ಅಮಿತಾ ಮೊದಲಾದವರು ಪಾಲ್ಗೊಂಡರು. ಡಾ. ರಾಜರಾಮ್‌ ಆಳ್ವ ಉಪಸ್ಥಿತರಿದ್ದರು.

ಕೆ.ಟಿ. ಆಳ್ವರು ಶಿಕ್ಷಣಕ್ಕಾಗಿ ನೀಡುತ್ತಿದ್ದ ಆದ್ಯತೆ ಹಾಗೂ ಪ್ರೋತ್ಸಾವನ್ನು ಎಲ್ಲರೂ ತಮ್ಮ ಮಾತಿನಲ್ಲಿ ಉಲ್ಲೇಖಿಸಿದರು.ಮುಡಿಪು ಸರಕಾರಿ ಪ.ಪೂ ಕಾಲೇಜಿನ ಹಳೆ ವಿದ್ಯಾರ್ಥಿ ಬಳಗದ ಪ್ರವೀಣ್‌ ಅಮ್ಮೆಂಬಳ ಕಾರ್ಯಕ್ರಮ ನಿರ್ವಹಿಸಿದರು, ಇಸ್ಮತ್‌ ಪಜೀರ್‌ ಸ್ವಾಗತಿಸಿದರು. ಅನ್ನಪೂರ್ಣೇಶ್ವರಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago