ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಚುನಾವಣೆ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಅವರು ದೀಪ ಬೆಳಗಿಸಿ ಶುಭ ಹಾರೈಸಿದರು.
ಈ ಸಂದರ್ಭ ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು ಮಾತನಾಡಿ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಬಸವಣ್ಣನವರು ಅಸಮಾನತೆಯನ್ನು ಹೋಗಲಾಡಿಸಲು ಹೋರಾಡಿದ ರೀತಿ ಅದ್ಭುತವಾದದ್ದು. ತಾರತಮ್ಯಗಳನ್ನು ನಿವಾರಿಸಿ ಸಾಮಾಜಿಕ ಸಮಾನತೆಯ ಉದಾತ್ತ ಚಿಂತನೆಗಳನ್ನು ಸಾಕಾರಗೊಳಿಸಲು 12 ನೇ ಶತಮಾನದಲ್ಲಿಯೇ ಪಣತೊಟ್ಟ ಮಹಾನುಭಾವ ಬಸವಣ್ಣನವರು ಎಂದ ಹೇಳಿದರು.
ಈ ಸಂದರ್ಭ ಕಂದಾಯ ನಿರೀಕ್ಷಕರಾದ ವಿಜಯ್ ಆರ್, ಜನಾರ್ದನ್ ಜೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.