ಅಹಿತಕರ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡದಾದ್ಯಂತ ನಿಷೇಧಾಜ್ಞೆ

ಮಂಗಳೂರು: ದಿನಾಂಕ 01.05.2025ರಂದು ಮಂಗಳೂರಿನ ಬಜ್ಪೆ ಪರಿಸರದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಮಾನ್ಯ ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕ 05.05.2025ರ ವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶಿರುತ್ತಾರೆ. ಮಂಗಳೂರಿನಲ್ಲಿ ಈಗಾಗಲೇ ಮೇ. 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.

ನಿಷೇಧಾಜ್ಞೆ ಹಿನ್ನಲೆಯಲ್ಲಿ ಯಾವುದೇ ಕೂಗನ್ನುಉಚ್ಚರಿಸುವುದು, ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ, ಪ್ರಸಾರ ಮಾಡುವುದು, ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎಸಗುವುದು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ನಿಷೇಧಿಸಲಾಗಿದೆ. ಯಾವುದೇ ರೀತಿಯ ಶಸ್ತ್ರಗಳು, ದೊಣ್ಣೆಗಳು, ಮಾರಕಾಯುಧಗಳು ಸಾಗಾಟ ಮಾಡುವುದು ನಿಷೇಧಿಸಲಾಗಿದೆ. ಪಟಾಕಿಗಳನ್ನುಸಿಡಿಸುವುದು, ಸ್ಫೋಟಕ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.

ಯಾರದೇ ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ ಮಾಡುವುದು, ಸರಕಾರಿ ಸಂಸ್ಥೆಗಳು, ಸಂಘಟನೆಗಳು, ಅಧಿಕಾರಿ ಸಿಬ್ಬಂದಿ ನಿಂದನೆ, ಅವಹೇಳನಕಾರಿ ಘೋಷಣೆ, ಪ್ರಚೋದನಾಕಾರಿ ಭಾಷಣ, ಗಾಯನ ನಿಷೇಧಿಸಲಾಗಿದೆ. ಈ ನಿಷೇಧಾಜ್ಞೆ ಪ್ರದೇಶದಲ್ಲಿ ಸರಕಾರದ ಆದೇಶದಂತೆ ನಡೆಯುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಹಿತಕರ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡದಾದ್ಯಂತ ನಿಷೇಧಾಜ್ಞೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*