ಕೂವೆತ್ತಿಲದಲ್ಲಿ ನಡೆದ ಅಪಘಾತ: ಬಸ್ ಡಿಕ್ಕಿಯಾಗಿ ನರಿಕೊಂಬು ಗ್ರಾಮದ ತಂದೆ, ಮಗ ಸಾವು

\

ಜಾಹೀರಾತು

ಪುತ್ತೂರಿನ ಕಬಕ ಸಮೀಪ ಕೂವೆತ್ತಿಲ ಎಂಬಲ್ಲಿ ಭಾನುವಾರ ಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಸಾಗುತ್ತಿದ್ದ ತಂದೆ, ಮಗ ಸಾವನ್ನಪ್ಪಿದ್ದಾರೆ.

ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕರೂ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ಸದಸ್ಯರೂ ಆಗಿರುವ ಅರುಣ್ ಕುಲಾಲ್ ಬೋರುಗುಡ್ಡೆ (45) ಹಾಗೂ ಅವರ ಪುತ್ರ ಹತ್ತನೇ ತರಗತಿ ವಿದ್ಯಾರ್ಥಿ ಧ್ಯಾನ್ (15) ಮೃತಪಟ್ಟವರು.

ಬೆಳಗ್ಗೆ ಸುಮಾರು 11 ಗಂಟೆಗೆ ಅಪಘಾತ ಸಂಭವಿಸಿದ್ದು, ಸುಳ್ಯದ ಕಡೆಗೆ ವಿವಾಹ ಸಮಾರಂಭಕ್ಕೆಂದು ಬೈಕಿನಲ್ಲಿ ಸಾಗುತ್ತಿದ್ದ ನರಿಕೊಂಬು ಗ್ರಾಪಂ ಸದಸ್ಯ ಅರುಣ್ ಕುಲಾಲ್ ಬೋರುಗುಡ್ಡೆ  ಹಾಗೂ ಅವರ ಪುತ್ರ ಧ್ಯಾನ್ ಅವರಿಗೆ ಕೂವೆತ್ತಿಲ ತಿರುವಿನ ಬಳಿ ಮಂಗಳೂರು ಕಡೆ ಸಾಗುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿದೆ. ಪರಿಣಾಮ, ಅರುಣ್ ಕುಲಾಲ್ ಅವರು ಸ್ಥಳದಲ್ಲೇ ಮೃತಪಟ್ಟರೆ, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮಗನೂ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಅಪಘಾತದ ಪರಿಣಾಮ ಮಾಣಿ ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿ ತ್ತು. ಬಳಿಕ ಪುತ್ತೂರು ಟ್ರಾಫಿಕ್ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.

ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಅರುಣ್:

ಅರುಣ್ ಕುಲಾಲ್ ಬೋರುಗುಡ್ಡೆ ಅವರು ಹಿಂದು ಸಂಘಟನೆ, ಬಿಜೆಪಿ ಸಹಿತ ಹಲವು ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದು ಜನಾನುರಾಗಿಯಾಗಿದ್ದರು. ಇತ್ತೀಚೆಗಷ್ಟೇ ಸಮಾಜ ಸೇವಾ ಸಹಕಾರಿ ಸಂಘದ ನಿರ್ದೇಶಕ ಮಂಡಳಿಗೆ ಆಯ್ಕೆಯಾಗಿದ್ದರು. ನರಿಕೊಂಬು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರು ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಮರದ ಕೆಲಸವನ್ನು ಮಾಡುತ್ತಿದ್ದ ಅವರು, ಕುಲಾಲ ಮಾತೃಸಂಘದ ಸೇವಾದಳದ ಸದಸ್ಯರಾಗಿ, ಬಂಟ್ವಾಳ ಕುಲಾಲ ಯುವವೇದಿಕೆ ಉಪಾಧ್ಯಕ್ಷ, ನರಿಕೊಂಬು ಕುಲಾಲ ಸಂಘದ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿದ್ದ ಧ್ಯಾನ್:

ಅರುಣ್ ಕುಲಾಲ್ ಪುತ್ರ ಧ್ಯಾನ್ ಮೊನ್ನೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಸಿ ತೇರ್ಗಡೆಯಾಗಿದ್ದ. ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿ ಪಿಯುಸಿ ಸೇರುವ ಹೊಸ್ತಿಲಲ್ಲಿದ್ದ ಬಾಲಕ ರಸ್ತೆ ಅಪಘಾತದಲ್ಲಿ ಮರಣ ಹೊಂದುವಂತಾಗಿದೆ.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೂವೆತ್ತಿಲದಲ್ಲಿ ನಡೆದ ಅಪಘಾತ: ಬಸ್ ಡಿಕ್ಕಿಯಾಗಿ ನರಿಕೊಂಬು ಗ್ರಾಮದ ತಂದೆ, ಮಗ ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*