ಬಂಟ್ವಾಳ

ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಧರ್ಮಗುರುಗಳು, ಧರ್ಮಭಗಿನಿಯರ ಸಹಮಿಲನ

ಜಾಹೀರಾತು

ಯೇಸು ಕ್ರಿಸ್ತರ ಜನನದ ೨೦೨೫ನೇ ಜುಬಿಲಿಯ ಪ್ರಯುಕ್ತ ಲೊರೆಟ್ಟೊ ಮಾತಾ ಚರ್ಚ್ ನ ವ್ಯಾಪ್ತಿಯಲ್ಲಿ, ದೇಶ ವಿದೇಶದ ವಿವಿಧ ಧರ್ಮಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮ ಗುರುಗಳ ಹಾಗೂ ಧರ್ಮ ಭಗಿನಿಯರ ಸಹಮಿಲನ ಕಾರ್ಯಕ್ರಮ ಭಾನುವಾರ ನಡೆಯಿತು.

ಪ್ರಧಾನ ಧರ್ಮಗುರುಗಳಾಗಿ ವಂ. ಜೊಸ್ಸಿ ಫರ್ನಾಂಡಿಸ್ ಅವರೊಂದಿಗೆ ಸುಮಾರು ೪೫ ಧರ್ಮಗುರುಗಳು ಹಾಗೂ ಭಗಿನಿಯವರೊಂದಿಗೆ ಪವಿತ್ರ ಬಲಿಪೂಜೆಯೊಂದಿಗೆ ಆರಂಭವಾದ ಈ ಸಂಭ್ರಮ ಲೊರೆಟ್ಟೊ ಮಾತಾ ಸಂಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಿತು.

ಈ ಸಮಾರಂಭದ ರೂವಾರಿ ಹಾಗೂ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಲೊರೆಟ್ಟೊ ಚರ್ಚಿನ ಧರ್ಮಗುರುಗಳಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತಾ ಅವರು, ಯೇಸುಕ್ರಿಸ್ತರ ನಡೆನುಡಿಗಳನ್ನು ತಮ್ಮ ಜೀವನವನ್ನು ಅವರಿಗೋಸ್ಕರ ಮುಡಿಪಾಗಿಟ್ಟು ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ದೇಶ ವಿದೇಶಗಳಲ್ಲಿ ವಿವಿಧ ಧರ್ಮ ಪ್ರಾಂತ್ಯಗಳಲ್ಲಿ ಲೊರೆಟ್ಟೊ ಮಾತಾ ಪಾಲಕಿಯ ಆಶಿರ್ವಾದಗಳೊಂದಿಗೆ ಸೇವೆ ಸಲ್ಲಿಸುತ್ತಿರುವ ಧರ್ಮಗುರುಗಳು ಹಾಗೂ ಧರ್ಮ ಭಗಿನಿಯವರ ಈ ಸಹ ಮಿಲನ ಕಾರಕ್ರಮ ವಿಶೇಷತೆಗಳಿಂದ ತುಂಬಿದೆ. ಈ ಕಾರಕ್ರಮದ ಪ್ರಾಮುಖ್ಯತೆಯನ್ನು ಮನಗಂಡು ಕಾರ್ಯಕ್ರಮಗೊಸ್ಕರ ದೂರದ ಊರುಗಳಿಂದ ಆಗಮಿಸಿ ಇದರ ಸೊಬಗನ್ನು ಹೆಚ್ಚಿಸಿದೆ ಎಂದರು ಬಳಿಕ ಪ್ರತಿಯೊಬ್ಬರನ್ನು ಸ್ಮರಣಿಕೆ ನೀಡಿ ಸನ್ಮಾನಿಸಿದರು.ವೇದಿಕೆಯಲ್ಲಿ ವಂ. ಹೆರಾಲ್ಡ್ ಡಿಸೋಜ, ಸಂತ ಆಗ್ನೇಸ್ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮರಿಯ ರೂಪಾ, ಸಂಯೋಜಕರಾದ ಪ್ರಕಾಶ್ ವಾಸ್, ಸೂಪರಿಯರ್ ಭಗಿನಿ ಇಡೊಲಿನ್, ಮಂಡಳಿಯ ಕಾರ್ಯದರ್ಶಿಯವರಾದ ಶೈಲಾ ಬರ್ಬೊಜಾ ಸನ್ಮಾನಿತರು ವಿವರವನ್ನು ವಾಚಿಸಿದರು. ಪಾಲನಾ ಮಂಡಳಿಯ ಉಪಾಧ್ಯಾಕ್ಷರಾದ ಸಿಪ್ರಿಯಾನ್ ಡಿಸೋಜ ಸ್ವಾಗತಿಸಿದರು, ಲೆನ್ನಿ ಷೆನಾಂಡಿಸ್ ವಂದಿಸಿದರು.ಲೊರೆಟ್ಟೊ ಸಿಬಿಎಸ್ ಸಿ ಅಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ವಿಜೆಯ್ ಮೊನಿಸ್ ರವರು ನಿರೂಪಿದರು. ಇದೇ ಸಂದರ್ಭ ಚರ್ಚ್ ವ್ಯಾಪ್ತಿಯಲ್ಲಿ ಧರ್ಮಗುರುಗಳು, ಧರ್ಮಭಗಿನಿಯರಾಗಿ ಸೇವೆ ಸಲ್ಲಿಸಿ ನಿಧನ ಹೊಂದಿರುವವ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago