ಕೃಷಿ ಹೊಂಡ ನಿರ್ಮಾಣ: ಕೃಷಿ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೃಷಿ ಹೊಂಡ ನಿರ್ಮಾಣಕ್ಕೆ ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನಲ್ಲಿ  ಒಟ್ಟು ಸಾಮಾನ್ಯ ವರ್ಗಕ್ಕೆ 24, ಪರಿಶಿಷ್ಟ ಜಾತಿ 5, ಪರಿಶಿಷ್ಟ ಪಂಗಡ ರೈತರಿಗೆ 2, ಕೃಷಿ ಹೊಂಡ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. 1 ಎಕರೆ ಮೇಲ್ಪಟ್ಟು ಸಾಗುವಳಿ ವಿಸ್ತೀರ್ಣ ಹೊಂದಿರುವ ರೈತರು ತಮ್ಮ ವ್ಯಾಪ್ತಿಯ ರೈತಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಳೆಗಾಲ ಆರಂಭಕ್ಕೆ ಮುನ್ನ ಆಧಾರ್, ಆರ್.ಟಿ.ಸಿ, ಬ್ಯಾಂಕ್ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು ವಿನಂತಿಸಿದ್ದಾರೆ.

ಮಳೆ ನೀರು ಸಂಗ್ರಹಿಸಿ ಅಗತ್ಯ ಬಿದ್ದಾಗ ಬೆಳೆಗಳಿಗೆ ನೀರುಣಿಸಲು ಪೂರಕವಾದ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಜಿಲ್ಲೆಯ ರೈತರು ಉತ್ಸುಕತೆ ತೋರುತ್ತಿದ್ದಾರೆ.  ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸರಕಾರ ಶೇ.90 ರಷ್ಟು ಸಹಾಯಧನ ನೀಡುತ್ತಿದೆ.  ಬಂಟ್ವಾಳ ತಾಲೂಕಿನಲ್ಲಿ ಕಳೆದ ಸಲ  ಒಟ್ಟು 48 ಕೃಷಿ ಹೊಂಡ ನಿರ್ಮಿಸುವ ಗುರಿ ಇತ್ತು. 48 ರೈತರು  ಅರ್ಜಿ ಸಲ್ಲಿಸಿದ್ದರು.ಗುರಿಯಂತೆ 48 ಫಲಾನುಭವಿಗಳು ಕೃಷಿ ಹೊಂಡವನ್ನು ಸರಕಾರದ ಸಹಾಯಧನ ಪಡೆದು ನಿರ್ಮಿಸಿಕೊಂಡಿದ್ದಾರೆ.

ಸಹಾಯಧನವೆಷ್ಟು?   21x21x3 ಅಳತೆಯ ಕೃಷಿ ಹೊಂಡ ನಿರ್ಮಾಣಕ್ಕೆ 1.13 ಲಕ್ಷ ರೂ.ವೆಚ್ಚವಾಗಲಿದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ಅಂದರೆ ರೂ.90,912 ಹಾಗೂ ಪರಿಶಿಷ್ಟ ವರ್ಗದವರಿಗೆ ಶೇ.90 ಅಂದರೆ ರೂ.1.02 ಲಕ್ಷ ಸಹಾಯಧನ ನೀಡಲಾಗುವುದು. ಇತರ ಗಾತ್ರದ ಕೃಷಿ ಹೊಂಡಗಳಿಗೂ ಅಳತೆಗೆ ಅನುಗುಣವಾಗಿ ಸಹಾಯಧನ ದೊರೆಯಲಿದೆ. ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಲು ಸಾಮಾನ್ಯ ವರ್ಗದವರಿಗೆ ಶೇ.40 (7600 ದಿಂದ 14800 ರೂ.) ಮತ್ತು ಪರಿಶಿಷ್ಟ ವರ್ಗದವರಿಗೆ ಶೇ.50 (9500 ರಿಂದ 18500 ರೂ.) ರಷ್ಟು ಸಹಾಯಧನ ನೀಡಲಾಗುತ್ತದೆ.  ಇದಲ್ಲದೆ ಕೃಷಿ ಹೊಂಡಕ್ಕೆ ಅಳವಡಿಸುವ ಪಾಲಿಥಿನ್ (ಟಾರ್ಪಲ್)  ಅಳವಡಿಸಿಕೊಳ್ಳಲು ಸಾಮಾನ್ಯ ವರ್ಗದವರಿಗೆ ಶೇ.80 ಮತ್ತು ಪರಿಶಿಷ್ಟರಿಗೆ ಶೇ.90 ರಷ್ಟು ಸಹಾಯಧನ ದೊರೆಯಲಿದೆ ಎಂದು ಇಲಾಖೆ ತಿಳಿಸಿದೆ.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೃಷಿ ಹೊಂಡ ನಿರ್ಮಾಣ: ಕೃಷಿ ಇಲಾಖೆಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*