ಬಂಟ್ವಾಳ

ಮೊದಲ 30 ವಿದ್ಯಾರ್ಥಿಗಳಿಗೆ ಉಚಿತ – ಬಂಟ್ವಾಳ ಸರಕಾರಿ ಪದವಿ ಕಾಲೇಜಿಗೆ ಸೇರಿದರೆ ಏನೆಲ್ಲಾ ಲಾಭವಿದೆ? ವಿವರ ಇಲ್ಲಿದೆ

ಮೊದಲ ಮೂವತ್ತು ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ಬಿಎಯಲ್ಲಿ 15, ಬಿಕಾಂನಲ್ಲಿ 15 ಮಕ್ಕಳಿಗೆ ಪ್ರವೇಶವನ್ನು ಉಚಿತವಾಗಿ ಮಾಡಲಾಗಿದೆ ಎಂಬ ಆಫರ್ ನೊಂದಿಗೆ ಬಂಟ್ವಾಳದ ಕಾಮಾಜೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿಯನ್ನು ಆಹ್ವಾನಿಸಲಾಗಿದೆ.

ಜಾಹೀರಾತು

ಬಿಎ, ಬಿಕಾಂ ಮತ್ತು ಎಂಕಾಂ ಕೋರ್ಸುಗಳು ಇಲ್ಲಿ ಲಭ್ಯವಿದೆ. ಪೂರ್ಣ ಪ್ರಮಾಣದ ಪ್ರಾಧ್ಯಾಪಕ ವೃಂದವಿದೆ. ಸುಸಜ್ಜಿತ ಸಭಾಭವನ ಮತ್ತು ಗ್ರಂಥಾಲಯ ಸೌಲಭ್ಯವಿದೆ. ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆ ನ್ಯಾಕ್ ಮಾನ್ಯತೆಯಲ್ಲಿ ಬಿ ಗ್ರೇಡ್ ಪಡೆದ ಕಾಲೇಜು ಇದಾಗಿದ್ದು, ಕಾಲೇಜು ಕ್ಯಾಂಪಸ್ ವರೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯವೂ ಇದೆ ಎಂದು ಪ್ರಿನ್ಸಿಪಾಲ್ ಪ್ರಕಾಶ್ಚಂದ್ರ ಶಿಶಿಲ ಮಾಹಿತಿ ನೀಡಿದ್ದಾರೆ.

ಕಾಲೇಜಿನ ಮಕ್ಕಳಿಗೆ ಬಿಸಿಯೂಟ ಸೌಲಭ್ಯವೂ ಇದ್ದು, ಬಡ ಮಕ್ಕಳಿಗೆ ಇದು ಅನುಕೂಲಕರವಾಗಿದೆ. ಹುಡುಗಿಯರಿಗೆ ಬೋಧನಾ ಶುಲ್ಕ ಮರುಪಾವತಿ ಮಾಡಲಾಗುತ್ತದೆ. ಎಲ್ಲ ಸರಕಾರಿ ಮತ್ತು ಖಾಸಗಿ ಸ್ಕಾಲರ್ ಶಿಪ್ ಇಲ್ಲಿ ಲಭ್ಯ. ಹುಡುಗಿಯರಿಗೆ ಉಚಿತ ಬಿಸಿಎಂ ಹಾಸ್ಟೆಲ್ ಬಳಸಿಕೊಳ್ಳಲು ಅವಕಾಶವಿದೆ. ಕಾಲೇಜಿನಲ್ಲಿ ವಿಶ್ರಾಂತಿ ಕೊಠಡಿ ಸೌಲಭ್ಯವೂ ಇದ್ದು, ಉಚಿತ ಕಂಪ್ಯೂಟರ್, ಯೋಗ ತರಬೇತಿಯೂ ಇದೆ. ಎಲ್.ಸಿ.ಡಿ. ಪ್ರಾಜೆಕ್ಟರ್, ಪವರ್ ಪಾಯಿಂಟ್ ನಿಂದ ಪಾಠ ಕೇಳಬಹುದು. ಉಪಗ್ರಹ ಆಧರಿತ ಸಂವಹನ ತರಬೇತಿ, ಸಂದರ್ಶನ ತರಬೇತಿ ಇತ್ಯಾದಿ ಕೌಶಲಾಭಿವೃದ್ಧಿ ಕಾರ್ಯಕ್ರಮಗಳು ಇಲ್ಲಿವೆ. ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ. ನಿರಂತರ ಪಠ್ಯ ಮತ್ತು ಸಹಪಠ್ಯ ಪೂರಕ ಚಟುವಟಿಕೆಗಳನ್ನು ನಡೆಸಲು ಅವಕಾಶವಿದೆ. ಎನ್ನೆಸ್ಸೆಸ್, ರೆಡ್ ಕ್ರಾಸ್, ರೇಂಜರ್ ಮತ್ತು ರೋವರ್ಸ್ ಘಟಕಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ನುರಿತ ಪ್ರಾಧ್ಯಾಪಕರು, ಬೋಧಕರಿದ್ದಾರೆ. ವಿದ್ಯಾರ್ಥಿಗಳಿಗೆ ಹೋಗಿಬರಲು ಕೆಎಸ್ಸಾರ್ಟಿಸಿ ಬಸ್ ಕಾಲೇಜಿನವರೆಗೆ ಬರುತ್ತದೆ. ವಿದ್ಯಾಸಕ್ತರು ಕಾಲೇಜನ್ನು ಸಂಪರ್ಕಿಸಬಹುದು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ವಾರ್ಷಿಕ ಮಹಾಸಭೆ

inauguration ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕಿನ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ…

3 minutes ago