ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನಗಳಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆದುಕೊಂಡು ಬಂದ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ ಈ ವರ್ಷ ಜುಲೈ 25ರಿಂದ ಆಗಸ್ಟ್ 23ವರೆಗೆ ನಡೆಯಲಿದೆ ಎಂದು ದೇವಳ ಪ್ರಕಟಣೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಯಕ್ಷಗಾನ ಸಂಘದವರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದ್ದಾರೆ. ಸಂಜೆ 6.30ರಿಂದ 9.30ವರೆಗೆ ಇರಲಿದೆ. ಸೇವೆಯಲ್ಲಿ ಭಾಗವಹಿಸಲು ಇಚ್ಛಿಸುವವರು ತಮಗೆ ಅನುಕೂಲವಾದ ಕನಿಷ್ಠ 5 ದಿನಗಳನ್ನು ತಿಳಿಸಿದಲ್ಲಿ ಒಂದು ದಿನವನ್ನು ಆಯ್ಕೆ ಮಾಡಿ ತಿಳಿಸಲಾಗುವುದು. ಯಾವುದೇ ವೆಚ್ಚವನ್ನು ನೀಡಲಾಗುವುದಿಲ್ಲ. ಯಕ್ಷಗಾನ ಸಾಹಿತ್ಯ ಲಭ್ಯವಿರುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9071923352 ಅಥವಾ 948139049 ಸಂಪರ್ಕಿಸಲು ಕೋರಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…