ಬಂಟ್ವಾಳ

ಬಂಟ್ವಾಳ: ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆಗೆ ಆಹ್ವಾನ

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನಗಳಲ್ಲಿ ಶತಮಾನಗಳಿಂದ ಅವ್ಯಾಹತವಾಗಿ ನಡೆದುಕೊಂಡು ಬಂದ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಲೆ ಸೇವೆ ಈ ವರ್ಷ ಜುಲೈ 25ರಿಂದ ಆಗಸ್ಟ್ 23ವರೆಗೆ ನಡೆಯಲಿದೆ ಎಂದು ದೇವಳ ಪ್ರಕಟಣೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಯಕ್ಷಗಾನ ಸಂಘದವರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದ್ದಾರೆ. ಸಂಜೆ 6.30ರಿಂದ 9.30ವರೆಗೆ ಇರಲಿದೆ. ಸೇವೆಯಲ್ಲಿ ಭಾಗವಹಿಸಲು ಇಚ್ಛಿಸುವವರು ತಮಗೆ ಅನುಕೂಲವಾದ ಕನಿಷ್ಠ 5 ದಿನಗಳನ್ನು ತಿಳಿಸಿದಲ್ಲಿ ಒಂದು ದಿನವನ್ನು ಆಯ್ಕೆ ಮಾಡಿ ತಿಳಿಸಲಾಗುವುದು. ಯಾವುದೇ  ವೆಚ್ಚವನ್ನು ನೀಡಲಾಗುವುದಿಲ್ಲ. ಯಕ್ಷಗಾನ ಸಾಹಿತ್ಯ ಲಭ್ಯವಿರುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9071923352 ಅಥವಾ 948139049 ಸಂಪರ್ಕಿಸಲು ಕೋರಲಾಗಿದೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.