ಪ್ರಮುಖ ಸುದ್ದಿಗಳು

ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ: ಮಕ್ಕಳ ಹೃದ್ರೋಗ ಶಾಸ್ತ್ರ ಕಾರ್ಯಾಗಾರ

ಮಂಗಳೂರು: ದೇಶದಲ್ಲಿ ಇತ್ತೀಚೆಗೆ ಮಕ್ಕಳಲ್ಲಿ ಹೃದ್ರೋಗ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿದ್ದು, ಇದರ ಮಾಹಿತಿ, ಜಾಗೃತಿ, ಮುಂಜಾಗೃತ ಕ್ರಮ, ಆಧುನಿಕ ಚಿಕಿತ್ಸಾ ವಿಧಿವಿಧಾನಗಳ ಬಗ್ಗೆ ಈ ವೈದ್ಯಕೀಯ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಹೇಳಿದರು.

ಜಾಹೀರಾತು

ಅವರು ಕಣಚೂರು ವೈದ್ಯಕೀಯ ಶಿಕ್ಷಣ ಕಾಲೇಜಿನಲ್ಲಿ ಶಿಶು ಮತ್ತು ಮಕ್ಕಳ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ತಮ್ಮ ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣದ ಅಂಗವಾಗಿ ಎರಡು ದಿನ ಅವಧಿಯ ಮಕ್ಕಳ ಹೃದ್ರೋಗ ಶಾಸ್ತ್ರ ಶಿಕ್ಷಣ, ಆರೈಕೆ, ಮತ್ತು ಚಿಕಿತ್ಸೆಯ ಶನಿವಾರ ಕಾಲೇಜಿನ ಡ್ರೋಮ್ ಸಭಾಂಗಣದಲ್ಲಿ ಜರುಗಿದ ರಾಜ್ಯ ಮಟ್ಟದ ವೈದ್ಯಕೀಯ ಕಾರ್ಯಾಗಾರವನ್ನು ಉದ್ಘಾಟಿಸಿ ವೈದ್ಯಕೀಯ ವೃಂದ ಮತ್ತು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿ ವೃಂದದವರನ್ನು ಉದ್ದೇಶಿಸಿ ಮಾತನಾಡಿದರು.

ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರಹಮಾನ್ ಮಾತನಾಡಿ, ವೈದ್ಯರು ನಿರಂತರ ಅಧ್ಯಯನ, ಸಂಶೋಧನೆಯಲ್ಲಿ ತೊಡಗಿ ನೂತನ ಅವಿಷ್ಕಾರಗಳಿಗೆ ಸ್ಪಂದಿಸಿ ತಮ್ಮ ವೈದ್ಯಕೀಯ ಜ್ಞಾನವನ್ನು ವೃದ್ದಿಸಿ ಯಶಸ್ಸು ಸಾಧಿಸಿ ಜನಮನ್ನಣೆಗೆ ಪಾತ್ರರಾಗಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೊಚ್ಚಿನ್ ನಗರ ಮೂಲದ ಡಾ. ಕೃಷ್ಣ ಕುಮಾರ್ ಹಾಗೂ ಬೆಂಗಳೂರು ನಗರ ಮೂಲದ ಡಾ. ಸೇಜಲ್ ಶಾರವರು ಹೃದ್ರೋಗ ಶಾಸ್ತ್ರ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆ, ನೀಡಿದ ಅಮೂಲ್ಯ ಕೊಡುಗೆ ಮತ್ತು ಸಾಧಿಸಿದ ಅಮೋಘ ಸಾಧನೆಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಶಹನವಾಜ್ ಮಣಿಪಾಡಿಯವರು ಕಾರ್ಯಾಗಾರದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ, ದೇಶದ ನಾನಾ ಭಾಗಗಳಿಂದ ಭಾಗವಹಿಸಿದ ಖ್ಯಾತ, ನುರಿತ, ಮಕ್ಕಳ ಹೃದ್ರೋಗ ಪ್ರವೀಣರು, ಶಾಸ್ತ್ರ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ, ಮಕ್ಕಳಲ್ಲಿ ಕಾಣುವ ಹೃದಯ ಸಂಬಂಧಿ ವಿವಿಧ ರೋಗಗಳ ಕಾರಣ, ಲಕ್ಷಣ, ಜಾಗೃತಿ ಮತ್ತು ನಾನಾ ಚಿಕಿತ್ಸಾ ವಿಧಿವಿಧಾನಗಳ ಬಗ್ಗೆ ಅತಿಥಿ ಉಪನ್ಯಾಸ ನೀಡಲಿರುವರು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಕಣಚೂರು ವೈದ್ಯಕೀಯ ವಿಜ್ಞಾನ ಸಲಹ ಸಮಿತಿ ಸದಸ್ಯ ಡಾ. ಎಂ.ವಿ. ಪ್ರಭು, ಮಕ್ಕಳ ಶಾಸ್ತç ವಿಭಾಗದ ಡಾ. ಶಂಶಾದ್ ಎ. ಖಾನ್, ಸಂಸ್ಥೆಯ ಆಡಳಿತ ಅಧಿಕಾರಿ ಡಾ. ರೋಹನ್ ಮೋನಿಸ್, ವೈದ್ಯಕೀಯ ಸಹ ಅಧೀಕ್ಷಕ ಡಾ. ಅಂಜನ್ ಕುಮಾರ್, ಕಾರ್ಯಗಾರದ ಸಲಹೆಗಾರರಾದ ಡಾ. ಪ್ರೇಮ್ ಆಳ್ವ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಡಾ. ಚೇತನ್ ತಾಂಡೆಲ್ ವಂದಿಸಿದರು. ಈ ಕಾರ್ಯಾಗಾರದಲ್ಲಿ ಸುಮಾರು 150 ವೈದ್ಯಕೀಯ ಪ್ರತಿನಿಧಿಗಳು ಸಕ್ರೀಯವಾಗಿ ಭಾಗವಹಿಸಿದ್ದರು. ಡಾ. ವರ್ಷ ಸ್ವಾಗತಿಸಿದರು ಮತ್ತು ಡಾ. ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.