ಮಂಗಳೂರು: ನಗರ ಹೊರವಲಯದ ಜಪ್ಪಿನಮೊಗರು ಬಳಿ ಬುಧವಾರ ಮುಂಜಾನೆ ರಾ.ಹೆ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಅವರ ಸ್ನೇಹಿತ ಅಮನ್ ರಾವ್ ಅವರು ಮೃತಪಟ್ಟಿದ್ದಾರೆ. ಕಾರು ಕಿರುಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅವರ ಅಕಾಲಿಕ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ.
ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಸತೀಶ್ ಅಮೀನ್ ಅವರ ಪುತ್ರ ಓಂಶ್ರೀ ಅಪಘಾತದಲ್ಲಿ ನಿಧನರಾದ ವಿಷಯ ತಿಳಿದು ಆಘಾತವಾಗಿದೆ. ಅವರು ವಿದ್ಯಾರ್ಥಿ ಸಂಘಟನೆ ಮೂಲಕ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಪ್ರತಿಭಾವಂತ ಯುವಕ. ವಿದ್ಯಾರ್ಥಿ ಪರ ಹೋರಾಟಗಳಲ್ಲಿ ಭಾಗವಹಿಸುತ್ತಾ ತನ್ನನ್ನು ತಾನು ನಿಸ್ವಾರ್ಥವಾಗಿ ತೊಡಗಿಸಿಕೊಂಡಿದ್ದ ಅವರ ಅಗಲುವಿಕೆ ಪಕ್ಷಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ನ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ.ಅಡ್ಯಂತಾಯ, ಮೊಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್.ಮೊಹಮ್ಮದ್, ಜಿ.ಎ.ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಸದಾಶಿವ್ ಉಳ್ಳಾಲ್, ಮಮತಾ ಗಟ್ಟಿ, ಬ್ಲಾಕ್ ಅಧ್ಯಕ್ಷರಾದ ಪುರುರೋಷತ್ತಮ ಚಿತ್ರಾಪುರ, ಪ್ರಕಾಶ್ ಸಾಲ್ಯಾನ್, ಜೆ.ಅಬ್ದುಲ್ ಸಲೀಂ, ರಮೇಶ್ ಶೆಟ್ಟಿ ಬೋಲಿಯಾರ್, ಪ್ರಶಾಂತ್ ಕಾಜೆವ, ಸುರೇಂದ್ರ ಕಂಬಳಿ, ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಸತೀಶ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಕೃಷ್ಣ ಪ್ರಸಾದ್ ಆಳ್ವ, ಪದ್ಮನಾಭ ಪೂಜಾರಿ, ಪಿ.ಮೋಹನ್ ಕೋಟ್ಯಾನ್, ಪಿ.ಸಿ.ಜಯರಾಂ, ಪ್ರವೀಣ್ ಕುಮಾರ್ ಜೈನ್, ಪಿ.ಕೆ.ಅಭಿಲಾಷ್, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರಾದ ಇಬ್ರಾಹೀಂ ನವಾಝ್, ಸುಹಾನ್ ಆಳ್ವ, ಶಾಲೆಟ್ ಪಿಂಟೋ, ಜೋಕಿಂ ಡಿಸೋಜಾ, ಕೆ.ಕೆ.ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ದಿನೇಶ್ ಮುಳೂರು, ನಾರಾಯಣ ನಾಯ್ಕ್, ಮನೋರಾಜ್ ರಾಜೀವ, ಲಾರೆನ್ಸ್ ಡಿ’ಸೋಜಾ, ಡಾ.ಶೇಖರ್ ಪೂಜಾರಿ, ಶುಭಾಷ್ಚಂದ್ರ ಶೆಟ್ಟಿ ಕೊಲ್ನಾಡ್, ಚೇತನ್ ಬೆಂಗ್ರೆ, ಬಿ.ಎಂ.ಅಬ್ಬಾಸ್ ಅಲಿ, ಶೈಲಜಾ, ಸುದರ್ಶನ್ ಜೈನ್, ಅಲಿಸ್ಟರ್ ಡಿಕುನ್ಹ, ಮ.ನ.ಪಾ ಸದಸ್ಯರಾದ ಭಾಸ್ಕರ್.ಕೆ, ಅಬ್ದುಲ್ ರವೂಫ್, ಅನಿಲ್ ಕುಮಾರ್, ಪ್ರವೀಣ್ ಚಂದ್ರ ಆಳ್ವ, ಲ್ಯಾನ್ಸ್ ಲೋಟೊ ಪಿಂಟೊ, ಕೇಶವ ಮರೋಳಿ, ನವೀನ್ ಡಿಸೋಜ, ಎ.ಸಿ.ವಿನಯರಾಜ್, ಜೆಸಿಂತಾ, ಸಂಶುದ್ದೀನ್ ಕುದ್ರೋಳಿ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಝೀನತ್ ಸಂಶುದ್ದೀನ್ ಬಂದರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚೇತನ್ ಕುಮಾರ್, ತನ್ವೀರ್ ಶಾ, ಕಿಶೋರ್ ಶೆಟ್ಟಿ, ನೀರಜ್ ಚಂದ್ರಪಾಲ್, ನಝೀರ್ ಬಜಾಲ್, ನೀರಜ್ ಚಂದ್ರಪಾಲ್, ವಿಕಾಸ್ ಶೆಟ್ಟಿ ಏರ್ ಪೋರ್ಟ್ ಖಾದರ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸಂಪಾತ ಸೂಚಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…