ಬಂಟ್ವಾಳ ತುಳುಕೂಟ ವತಿಯಿಂದ ಬಂಟ್ವಾಳದ ಸ್ಪರ್ಶಾ ಸಭಾಂಗಣದಲ್ಲಿ ಶುಕ್ರವಾರ ಮೂರು ದಿನಗಳ ’ತುಳುವೆರೆನ ತುಳುನಾಡ ಸಂತೆ’ ಕುಕ್ಕು ಪೆಲಕಾಯಿ ಒಟ್ಟುಗು ತುಳು ಸಾಹಿತ್ಯ ಸಾಂಸ್ಕೃತಿಕ ರಂಗ್ ಕಾರ್ಯಕ್ರಮ ಆರಂಭಗೊಂಡಿದೆ. ತುಳುನಾಡ ಸಂತೆಯನ್ನು ಶಾಸಕ ರಾಜೇಶ್ ನಾಯ್ಕ್, ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ತುಳುಕೂಟ ಅಧ್ಯಕ್ಷ ಸುದರ್ಶನ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತುಳು ಲಿಪಿ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತುಳುಕೂಟ ಸ್ಥಾಪಕಾಧ್ಯಕ್ಷ ಎ ಸಿ. ಭಂಡಾರಿ, ಮೂಡೂರು-ಪಡೂರು ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್ ನ್ಯಾಯವಾದಿ, ನೋಟರಿ ಅಶ್ವನಿ ಕುಮಾರ್ ರೈ, ಉದ್ಯಮಿ ಸತೀಶ್ ಭಂಡಾರಿ ಕುಳತ್ತಬೆಟ್ಟು, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ತುಳು ಲಿಪಿ ಶಿಕ್ಷಕಿ ಗೀತಾ ಲಕ್ಷ್ಮೀಶ್ ಶುಭ ಹಾರೈಸಿದರು. ತುಳುಕೂಟ ಕೋಶಾಕಾರಿ ಸುಭಾಶ್ಚಂದ್ರ ಜೈನ್ ಸ್ವಾಗತಿಸಿ, ಸ್ವಾಗತ ಸಮಿತಿ ಸಂಚಾಲಕ ಸುಕುಮಾರ್ ಬಂಟ್ವಾಳ ವಂದಿಸಿದರು. ಕಾರ್ಯದರ್ಶಿ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.
On behalf of Bantwala Tulukuota, a three-day ‘Tuluverena Tulunada Santhe’ Kukku Pelakai Otgugu Tulu Sahitya Cultural Rang program has started on Friday at the Sparsha Hall of Bantwala.
FOR MORE DETAILS OF THIS EVENT CLICK HERE
ತುಳುಕೂಟ ಬಂಟ್ವಾಳದ ಅಟ್ಟನೆಡ್ ತುಳುವೆರೆನ ತುಳುನಾಡ ಸಂತೆ – ವಿವರಗಳು ಇಲ್ಲಿವೆ — Bantwalnews.com
Be the first to comment on "Bantwal: ಬಂಟ್ವಾಳದಲ್ಲಿ ಮೂರು ದಿನಗಳ ತುಳುವೆರೆನ ತುಳುನಾಡ ಸಂತೆ ಆರಂಭ"