Bantwal BJP Protest: ಬಂಟ್ವಾಳ ಪುರಸಭೆ ಮುಂಭಾಗ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಪ್ರತಿಭಟನೆ

BANTWAL

ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ   ಬಂಟ್ವಾಳ ಪುರಸಭೆ ಮುಂಭಾಗ ಸೋಮವಾರ ನಡೆದಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವ ವಹಿಸಿದರು.ಈ ಸಂದರ್ಭ ಮಾತನಾಡಿದ ಅವರು ರಾಜ್ಯ ಸರಕಾರದ ನೀತಿಗಳಿಂದಾಗಿ ಯಾವುದೇ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿಲ್ಲ. ತುಷ್ಟೀಕರಣದ ರಾಜಕಾರಣವನ್ನು ಮಾಡುತ್ತಿರುವ ಆಳುವ ಸರಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದರು.

ಬಿಜೆಪಿ ಮುಖಂಡ ರಾಮದಾಸ ಬಂಟ್ವಾಳ ಮಾತನಾಡಿ, ಇಂದು ತುರ್ತುಪರಿಸ್ಥಿತಿಯನ್ನು ನೆನಪು ಮಾಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದ್ದು,ಆಡಳಿತ ಪಕ್ಷದ ಶಾಸಕರೇ ಆಶ್ರಯ ಹಗರಣದ ಕುರಿತು ಮಾತನಾಡುತ್ತಿದ್ದಾರೆ. ನಿರ್ಮಾಣ ಕಾಮಗಾರಿ ಪೂರ್ತಿ ನಿಂತಿದ್ದು, ಸಮಸ್ಯೆಗಳಿಗೆ ಸರಕಾರವೇ ಹೊಣೆಗಾರನಾಗಿದೆ ಎಂದರು.

BANTWAL

ಹಿರಿಯ ಮುಖಂಡರೂ ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ನೇತೃತ್ವದಲ್ಲಿ ಪುರಸಭೆ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪ್ರಮುಖರಾದ ದಿನೇಶ್ ಭಂಡಾರಿ, ಬೊಂಡಾಲ ಜನಾರ್ದನ ಕುಲಾಲ್, ಮಚ್ಚೇಂದ್ರ ಸಾಲಿಯಾನ್, ಸುರೇಶ್ ಕುಲಾಲ್, ಸುರೇಶ್ ಟೈಲರ್, ಗಂಗಾಧರ ಪೂಜಾರಿ, ಪ್ರಣಾಮ್ ಅಜ್ಜಿಬೆಟ್ಟು, ಲಕ್ಷಣರಾಜ್, ಭಾಸ್ಕರ ಟೈಲರ್, ಗೋಪಾಲ ಸುವರ್ಣ, ಗಣೇಶ್ ಕಾಮಾಜೆ, ಸತೀಶ್ ಶೆಟ್ಟಿ ಮೊಡಂಕಾಪು, ಗಣೇಶ್ ದಾಸ್, ಪುರಸಭೆ ಸದಸ್ಯರಾದ ವಿದ್ಯಾವತಿ ಪ್ರಮೋದ್ ಕುಮಾರ್, ರೇಖಾ ರಮನಾಥ ಪೈ, ಮೀನಾಕ್ಷಿ ಜೆ. ಗೌಡ, ಶಶಿಕಲಾ ಪ್ರಭಾಕರ್, ಚೈತನ್ಯದಾಸ್, ದೇವಕಿ ಉಪಸ್ಥಿತರಿದ್ದರು. ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal BJP Protest: ಬಂಟ್ವಾಳ ಪುರಸಭೆ ಮುಂಭಾಗ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*