ಬಂಟ್ವಾಳ

ಜುಲೈ 9 ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಿ: ಪಿ.ಪಿ ಅಪ್ಪಣ್ಣ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಜುಲೈ 9ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಇದನ್ನು ಯಶಸ್ವಿಗೊಳಿಸಲು ಎ.ಐ.ಸಿ.ಸಿ.ಟಿ.ಯು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕರ ಸಮಾವೇಶ ಬಿ.ಸಿ.ರೋಡ್ ನ ಡಾ. ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಜಾಹೀರಾತು

ಸಮಾವೇಶವನ್ನು ಉದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ರಾಜ್ಯ ಅಧ್ಯಕ್ಷರಾದ ಪಿ.ಪಿ ಅಪ್ಪಣ್ಣ ಮಾತನಾಡಿ ಕೇಂದ್ರದ ಬಿಜೆಪಿ ಸರಕಾರದ 11 ವರ್ಷಗಳ ಆಡಳಿತದಲ್ಲಿ ದುಡಿಯುವ ಜನರ ಸಂಕಷ್ಟಗಳು ಮಿತಿಮೀರಿದೆ. ದುಡಿಯುವ ಜನತೆಗೆ ಕನಿಷ್ಠ ಕೂಲಿ ಕೂಡಾ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದಿಂದ ಜಾರಿಯಾದ ಕಾರ್ಮಿಕ ಕಾನೂನುಗಳನ್ನು ತೆಗೆದು ಹಾಕಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು ಈ ಸಂಹಿತೆಗಳು ಜಾರಿ ಆದರೆ ಕಾರ್ಮಿಕರು ಕಾರ್ಪೊರೇಟ್ ವರ್ಗದ ಗುಲಾಮರಾಗಬೇಕಾಗುತ್ತದೆ ಹಾಗೂ ಕಾರ್ಮಿಕರ ಎಲ್ಲಾ ಹಕ್ಕುಗಳು ಕಸಿಯಲ್ಪಡುತ್ತದೆ ಎಂದರು. ಈ ನಿಟ್ಟಿನಲ್ಲಿ ಜುಲೈ 9 ರಂದು ನಡೆಯುವ ಕಾರ್ಮಿಕರ ಅಖಿಲ ಭಾರತ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಪಾಲ್ಗೊಂಡು ಮುಷ್ಕರ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು . ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಕಾರ್ಮಿಕ ವರ್ಗ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಬೇಕೆಂದು ಕರೆ ನೀಡಿದರು.ಎ.ಐ.ಸಿ.ಸಿ.ಯು‌ ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ವಿನಯ ನಡುಮೊಗರು, ಅಖಿಲ ಭಾರತ ಕಿಸಾನ್ ಮಹಾಸಭಾದ ಮುಖಂಡರಾದ ಮಹಮ್ಮದ್ ಇಕ್ಬಾಲ್ ಹಳೆಮನೆ, ಮಹಾವೀರ್ ಜೈನ್ ಪುತ್ತೂರು, ಸಂಜೀವ ಬೆಳ್ತಂಗಡಿ. ಸುಲೈಮಾನ್ ಕೆಳಿಂಜ, ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಭರತ್ ಕುಮಾರ್, ಸತೀಶ್ ಕುಮಾರ್ ,ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಮುಖಂಡರಾದ ಸುಧಾ ರಾವ್ ಬೆಳ್ತಂಗಡಿ ಮುಂತಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು .

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.