Bantwal: ಮರಳು, ಕೆಂಪುಕಲ್ಲು ಸಿಗುವಂತೆ ಮರಳುನೀತಿ ರೂಪಿಸಿ: ಎಐಸಿಸಿಟಿಯು ಮನವಿ

A petition has been submitted to the district commissioner by the AICCTU urging the formulation of a coastal sand policy to make sand and red stones easily accessible to users. The petition was submitted through the Bantwal taluk office by the Dakshina Kannada District Building and Other Construction Workers Union district committee.

ಮರಳು ಮತ್ತು ಕೆಂಪು ಕಲ್ಲು ಸರಾಗವಾಗಿ ಬಳಕೆದಾರರಿಗೆ ಸಿಗುವಂತೆ ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ ಎಐಸಿಸಿಟಿಯು ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಪ್ರಗತಿಪರ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ ದ.ಕ ಜಿಲ್ಲಾ ಸಮಿತಿ ವತಿಯಿಂದ ಬಂಟ್ವಾಳ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಸಂಘದ ಆದ್ಯಕ್ಷರಾದ ರಾಮಣ್ಣ ವಿಟ್ಲ, ಕಾರ್ಯದರ್ಶಿ ಅಚ್ಯುತ ಕಟ್ಟೆ, ಮುಖಂಡರಾದ ರಾಜಾ ಚೆಂಡ್ತಿಮಾರ್, ರಘುರಾಮ ಪಳೇರಿ ಮುಂತಾದವರು ಇದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘವು ಸ್ವಾಗತಿಸುತ್ತದೆ. ಆದರೆ ಅದರ ಜೊತೆ ಜೊತೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕೃತವಾಗಿ ಮರಳು ಕೆಂಪು ಕಲ್ಲು ತೆಗೆಯಲು ಅವಕಾಶ ಮಾಡಿಕೊಡಬೇಕಾಗಿದೆ. ನಿಷೇಧದಿಂದ ಕಟ್ಟಡ, ಮನೆ ನಿರ್ಮಾಣ ಸೇರಿದಂತೆ ಎಲ್ಲಾ ರೀತಿಯ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿವೆ. ಈ ರೀತಿಯ ತೀರ್ಮಾಣಗಳನ್ನು ತೆಗೆದುಕೋಳ್ಳುವಾಗ ಅಧಿಕೃತ ಯೋಜನೆಗಳಿಗೆ ತೊಂದರೆಗಳು ಆಗದ ಹಾಗೆ ಕ್ರಮ ಕೈಗೊಳ್ಳಬೇಕು. ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಗಳಿಂದಲೇ ಅಧಿಕೃತವಾಗಿ ಮರಳು ದೊರೆಯಬೇಕು ಅಧಿಕೃತ ಮರಳು ಮತ್ತು ಕೆಂಪು ಕಲ್ಲು ಪೂರೈಕೆ ಆಗದೇ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತೀವ್ರವಾದ ಸಮಸ್ಯೆಯನ್ನು ಎದುರಿಸಿದ್ದಾರೆ.ಆವರ ಜೀವನ ನಿರ್ವಹಣೆ ಕಷ್ಟವಾಗಿದೆ. ಸರಕಾರ ಶೀಘ್ರವಾಗಿ ಮಧ್ಯ ಪ್ರವೇಶಿಸಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲಿ ಅಧಿಕೃತವಾಗಿ ಸಾಂಪ್ರದಾಯಿಕ ರೀತಿಯಲ್ಲಿ ಮರಳುಗಾರಿಗೆ ಮತ್ತು ಕಲ್ಲು ಗಣಿಗಾರಿಕೆಯನ್ನು ಸ್ಥಳೀಯ ಆಡಳಿತದಿಂದಲೇ ನಡೆಸಲು ಕ್ರಮ ಕೈಗೊಳ್ಳಬೇಕು. ಎಲ್ಲರಿಗೂ ಕಡಿಮೆ ದರದಲ್ಲಿ ಸರಳವಾಗಿ ಮತ್ತು ಸರಾಗವಾಗಿ ಮರಳು ಪೂರೈಕೆ ಆಗುವಂತೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉದ್ಯೋಗ ಅವಕಾಶಗಳು ಸಿಗುವಂತೆ ಶೀಘ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal: ಮರಳು, ಕೆಂಪುಕಲ್ಲು ಸಿಗುವಂತೆ ಮರಳುನೀತಿ ರೂಪಿಸಿ: ಎಐಸಿಸಿಟಿಯು ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*