ಬಂಟ್ವಾಳ

Bantwal: ಬಂಟ್ವಾಳದಲ್ಲಿ ಅಲ್ಲಲ್ಲಿ ಗಾಳಿಮಳೆ: ಹಲವೆಡೆ ಅನಾಹುತ

ಬಂಟ್ವಾಳ ತಾಲೂಕಿನ ಹಲವೆಡೆ ಮಳೆ ಮುಂದುವರಿದಿದ್ದು, ಗಾಳಿ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿದೆ.

ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದ ಘಟನೆ ನಡೆದಿದೆ. ಈಗಾಗಲೇ ಅಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ ಎಂದು ಕಂದಾಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳದಿಂದ ಪುಂಜಾಲಕಟ್ಟೆ ಕಡೆಗೆ ತೆರಳುವ ಹೆದ್ದಾರಿಯ ಬಿ.ಸಿ.ರೋಡ್ ನ ಭಂಡಾರಿಬೆಟ್ಟು ಸಮೀಪ ಮಳೆಗೆ ಮಣ್ಣುಸಹಿತ ಬಂಡೆಕಲ್ಲೊಂದು ಜರಿದು ರಸ್ತೆಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಬಳಿಕ ಪುರಸಭೆ ವತಿಯಿಂದ ತೆರವು ಕಾರ್ಯ ನಡೆಯಿತು. ಸದಸ್ಯ ಹರಿಪ್ರಸಾದ್, ಕಂದಾಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದ ಘಟನೆ ನಡೆದಿದೆ. ಈಗಾಗಲೇ ಅಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ ಎಂದು ಕಂದಾಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.

ಬಾಳ್ತಿಲ ಗ್ರಾಮದ‌ ಚಿಲಿಂಬಿ ಎಂಬಲ್ಲಿ ಸಂಕಪ್ಪ ಎಂಬವರ ವಾಸ್ತವ್ಯದ ಮನೆಗೆ ತೀವ್ರ ಹಾನಿಯಾಗಿರುತ್ತದೆ.

ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದ ಘಟನೆ ನಡೆದಿದೆ. ಈಗಾಗಲೇ ಅಲ್ಲಿ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ ಎಂದು ಕಂದಾಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ಬಾಳ್ತಿಲ ಗ್ರಾಮದ‌ ಚಿಲಿಂಬಿ ಎಂಬಲ್ಲಿ ಸಂಕಪ್ಪ ಎಂಬವರ ವಾಸ್ತವ್ಯದ ಮನೆಗೆ ತೀವ್ರ ಹಾನಿಯಾಗಿರುತ್ತದೆ. ಕೆದಿಲ ಗ್ರಾಮದಲ್ಲಿ ಮಾರಪ್ಪ ಸುವರ್ಣ ಎಂಬುವವರ ಜಮೀನಿನಲ್ಲಿರುವ ನಿರ್ಮಾಣ ಹಂತದ ಸಭಾಭವನದ ಕಟ್ಟಡದ ಮೇಲೆ ಅಕೇಶಿಯಾ ಮರ ಬಿದ್ದು ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖಾ ಕಚೇರಿ ಮಾಹಿತಿ ತಿಳಿಸಿದೆ.

ಜಾಹೀರಾತು

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.