ಪ್ರಮುಖ ಸುದ್ದಿಗಳು

Panemangalore Bridge: ಪಾಣೇರ್ ಸೇತುವೆ: ಎನ್.ಐ.ಟಿ.ಕೆ. ತಂಡದಿಂದ ವರದಿ ಸಲ್ಲಿಕೆ


PANEMANGALORE BRIDGE ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರಿಶೀಲನೆಗೆ ಸಂಬಂಧಿಸಿ ಮತ್ತಷ್ಟು ಅಧ್ಯಯನ ನಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ DINESH GUNDURAO ದಿನೇಶ್ ಗುಂಡೂರಾವ್ ನಿರ್ದೇಶನದಂತೆ BANTWAL MUNCIPALITY ಪುರಸಭೆ ಮುಖ್ಯಾಧಿಕಾರಿ ಮನವಿ ಮಾಡಿದ ಮೇರೆಗೆ ಆಗಮಿಸಿ ಪ್ರಾಥಮಿಕ ಸಮೀಕ್ಷೆ ನಡೆಸಿದ ಎನ್.ಐ.ಟಿ.ಕೆ. NITK ತಂಡ ಸೂಚಿಸಿದ್ದು,  ಲಘು ವಾಹನಗಳನ್ನಷ್ಟೇ ತಾತ್ಕಾಲಿಕವಾಗಿ ಸಂಚರಿಸಲು ಅವಕಾಶ ನೀಡಬಹುದು ಎಂದು ತಿಳಿಸಿದೆ.

ಸೇತುವೆಯನ್ನು ಬಲಪಡಿಸಲು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಂತ್ರಿಕ ಅಧ್ಯಯನವನ್ನು ವಿವರವಾಗಿ ನಡೆಸಬೇಕು ಎಂದು ಪ್ರೊ.ಬಿ.ಮನು ಮಾರ್ಗದರ್ಶನದಲ್ಲಿ ಸಹಾಯಕ ಪ್ರೊಫೆಸರ್ ಗಳಾದ ಡಾ. ಜೆ.ವಿಜಯ ವೆಂಗಡೇಶ್ ಕುಮಾರ್,  ಡಾ. ಟಿ.ಪಳನಿಸ್ವಾಮಿ ಅವರನ್ನು ಒಳಗೊಂಡ ತಂಡ ಬಂಟ್ವಾಳ ಮುಖ್ಯಾಧಿಕಾರಿಗಳಿಗೆ ವರದಿ ನೀಡಿದೆ. ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಗತ್ಯ ದುರಸ್ತಿ ಕಾರ್ಯ, ಸೇತುವೆಯನ್ನು ಗಟ್ಟಿಗೊಳಿಸುವ ಹಂತದ ಕ್ರಮಗಳನ್ನು ಮಾಡಬೇಕು. ಸಮಗ್ರ ತಾಂತ್ರಿಕ ಅಧ್ಯಯನವನ್ನು ಆದಷ್ಟು ಬೇಗ ಕೈಗೊಳ್ಳಬೇಕು ಎಂದು ತಿಳಿಸಿದೆ. ಸೇತುವೆ ಪ್ರವೇಶದ ಆರಂಭಿಕ ಜಾಗದಲ್ಲಿ ವತಿಯಿಂದ ತುರ್ತು ಕಾಮಗಾರಿಗಳನ್ನು ನಡೆಸುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.