B.C.ROAD – KULALA BHAVANA: ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ಚಿತ್ರಕಲಾ ತರಬೇತಿಗೆ ಚಾಲನೆ

ಬಂಟ್ವಾಳ : ಯಾವುದೇ ಕಲಿಕೆಗೆ ವಯಸ್ಸಿನ ಅಡ್ಡಿಇಲ್ಲ. ಯಾವ ವಯಸ್ಸಿನವರು ಕೂಡಾ ಯಾವುದೇ ವಯಸ್ಸಿನವರು ಯಾವುದೇ ತರಬೇತಿಯನ್ನು ಪಡೆಯಬಹುದು. ಚಿತ್ರಕಲೆಯೂ ಅಷ್ಟೇ, ಯಾವುದೇ ವಯಸ್ಸಿನವರು ತಮ್ಮ ಮನಸ್ಸಿನಲ್ಲಿ ಮೂಡಿದ ಭಾವನೆಗಳನ್ನು ಚಿತ್ರದ ಮುಖೇನ ವ್ಯಕ್ತ ಪಡಿಸಬಹುದು. ಹೆಚ್ಚು ಸಮಯ ಚಿತ್ರಕಲೆಯಲ್ಲಿ ತಲ್ಲೀನರಾದರೆ ಅವರಿಂದ ಮೂಡಿ ಬರಲಿರುವ ಚಿತ್ರವೂ ಅದ್ಭುತವಾಗಿರುತ್ತದೆ ಎಂದು ನಿವೃತ್ತ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್. ತಿಳಿಸಿದರು.

ಜಾಹೀರಾತು

ಅವರು ಆದಿತ್ಯವಾರ ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ರಿ. ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳದ ವತಿಯಿಂದ ನಡೆದ ಚೈತನ್ಯ ೪.೦ ನಿರಂತರ ಶಿಕ್ಷಣದಲ್ಲಿ ಚಿತ್ರಕಲೆ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.

ದಳಪತಿ ಜಯಂತ ಕುಲಾಲ್ ಅಗ್ರಬೈಲು ಮಾತನಾಡಿ ಕಳೆದ ಮೂರು ವರ್ಷಗಳಿಂದ ಕುಲಾಲ ಸೇವಾದಳದಿಂದ ಬಂಟ್ವಾಳದ ಕುಲಾಲ ಭವನದಲ್ಲಿ ಮಹೇಶ್ ಕುಲಾಲ್ ಕಡೇಶಿವಾಲಯ ಇವರಿಂದ ಡ್ಯಾನ್ಸ್, ಯೋಗ ಶಿಕ್ಷಕ ಕಿಶೋರ್ ಕೈಕುಂಜೆ ಇವರಿಂದ ಯೋಗ ತರಬೇತಿ, ಸೌಮ್ಯ ಸುಧಾಕರ್ ಇವರಿಂದ ಭಜನೆ ತರಬೇತಿಯನ್ನು ಉಚಿತವಾಗಿ ನೀಡುತ್ತಾ ಬಂದಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ತಿಳಿಸಿದರು.

ವೇದಿಕೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರಾದ ಗಣೇಶ್ ಕುಲಾಲ್ ಬೆದ್ರಗುಡ್ಡೆ, ದೇವದಾಸ ಅಗ್ರಬೈಲು, ತಾರನಾಥ ಮೊಡಂಕಾಪು, ರಾಘವೇಂದ್ರ ಕಾಮಾಜೆ, ಪ್ರೇಮನಾಥ ನೇರಂಬೋಳು ಸೇವಾದಳದ ಕಾರ್ಯದರ್ಶಿ ರಾಜೇಶ್ ಭಂಡಾರಿಬೆಟ್ಟು, ಸೇವಾದಳದ ಸದಸ್ಯರುಗಳಾದ ಪುರುಷೋತ್ತಮ ಸೌತೆಬಳ್ಳಿ, ಕಿಶೋರ್ ಕೈಕುಂಜೆ, ಚಿರಾಗ್ ಕಾಮಾಜೆ, ಬಿಪಿನ್ ಕರಿಂಗಾಣ, ಶೇಖರ ಮಣಿಹಳ್ಳ ಸಹಕರಿಸಿದರು

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "B.C.ROAD – KULALA BHAVANA: ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ಚಿತ್ರಕಲಾ ತರಬೇತಿಗೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*