ಬಂಟ್ವಾಳ

Bantwal: ಬಂಟ್ವಾಳ: ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ

ಬಂಟ್ವಾಳ ತಾಲೂಕು ಮಟ್ಟದ ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಪಂಚಾಯತಿನ 2ನೇ ಮಹಡಿಯಲ್ಲಿರುವ ಸಮಿತಿಯ ಕಚೇರಿಯಲ್ಲಿ ಪಂಚ ಗ್ಯಾರೆಂಟಿ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು

ಮಾಣಿಯಲ್ಲಿ ಫ್ಲೈಓವರ್ ನಿರ್ಮಾಣದ ಬಳಿಕ ಉಪ್ಪಿನಂಗಡಿಯಿಂದ ಬರುವ ಬಸ್ಸುಗಳು ಮಾಣಿ ಜಂಕ್ಷನ್‌ಗೆ ಬರುತ್ತಿಲ್ಲ. ಇದರಿಂದ ಮಾಣಿ ಗ್ರಾಮದ ಗ್ಯಾರಂಟಿ ಫಲಾನುಭವಿಗಳ ಸಹಿತ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಡಿಪೋ ಮಂಗಳೂರು/ ಪುತ್ತೂರು ನಿಯಂತ್ರಣಾಧಿಕಾರಿ ಅವರಿಗೆ ಪತ್ರ ಬರೆಯಲು ನಿರ್ಣಯಿಸಲಾಯಿತು.

ಅನಂತಾಡಿ ಗ್ರಾಮದ ಬಂಟ್ರಿಂಜ ವಿಟ್ಲ ಬಸ್ ಸಂಚಾರಕ್ಕೆ ಕ್ರಮಕೈಗೊಳ್ಳುವಂತೆ ಗ್ಯಾರೆಂಟಿ ಸಮಿತಿ ಅಧ್ಯಕ್ಷರ ಮನವಿಗೆ ಸ್ಪಂದಿಸಿ ಅನಂತಾಡಿ ಗ್ರಾಮಕ್ಕೆ ಬಸ್  ಸಂಚಾರದ ವ್ಯವಸ್ಥೆಯನ್ನು ಮಾಡಿರುವ ಕೆಎಸ್ಆರ್ಟಿಸಿ ಡಿಪೋ ಮಂಗಳೂರು ನಿಯಂತ್ರಣಾಧಿಕಾರಿ ಅವರಿಗೆ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಲಾಯಿತು.

ಬಿ.ಸಿ.ರೋಡು- ಕಲ್ಲಡ್ಕ – ಕರಿಂಗಾಣ ಬಸ್ ಸಂಚಾರವನ್ನು ಕೊರೋನ ಸಮಯದಲ್ಲಿ ಸ್ಥಗಿತಗೊಳಿಸಲಾಗಿತ್ತು, ಈ ಬಗ್ಗೆ ಸಮಿತಿಯ ಮನವವಿಗೆ ಸ್ಪಂದಿಸಿ ಪುನಃ ಬಸ್ಸು ಸಂಚಾರವನ್ನು ಪ್ರಾರಂಭಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಹೊಸ ಪಡಿತರ ಚೀಟಿಯನ್ನು ವಿತರಣೆಗೆ ಕ್ರಮಕೈಗೊಳ್ಳುವಂತೆ ಮತ್ತು ವೈದ್ಯಕೀಯ ಕಾರಣಕ್ಕಾಗಿ ವಿತರಿಸುತ್ತಿದ್ದ ಪಡಿತರ ಚೀಟಿಯನ್ನು ಸ್ಥಗಿತಗೊಳಿಸಿರುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿರುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಕಾರ್ಯದರ್ಶಿಗಳಾದ ಸಚಿನ್ ಕುಮಾರ್, ಪಂಚ ಗ್ಯಾರೆಂಟಿ ಅನುಷ್ಠಾನಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

13ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಜುಲೈ 13ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯವರೆಗೆ  ಸಮಿತಿ ವತಿಯಿಂದ ಉಚಿತ ದಂತ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಬಿ.ಸಿ.ರೋಡಿನ ಡಾ| ಬಿ.ಆರ್. ಅಂಬೆಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆಯುವಂತೆ ಪಂಚ ಗ್ಯಾರೆಂಟಿ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಯಂತಿ ವಿ. ಪೂಜಾರಿ ತಿಳಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.