Bantwal: ಕೆಂಪುಕಲ್ಲು, ಮರಳು ಅಭಾವದಿಂದ ಕೆಲಸವಿಲ್ಲದಂತಾದ ಕಾರ್ಮಿಕರು – ಸಮಸ್ಯೆ ಬಗೆಹರಿಸಲು ಬಿಎಂಎಸ್ ಸಂಯೋಜಿತ ಸಂಘಟನೆ ಒತ್ತಾಯ

ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗೆ ಕೆಂಪು ಕಲ್ಲು ಮತ್ತು ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸುತ್ತಿಲ್ಲ. ಇದರಿಂದ ದೈನಂದಿನ ಆದಾಯವನ್ನೇ ನಂಬಿಕೊಂಡಿರುವ ಕೆಲಸಗಾರರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಇದಕ್ಕೆ ಸೂಕ್ತ ಕ್ರಮ ಕೈಗೊಂಡು ಕಟ್ಟಡ ಕಾರ್ಮಿಕರು ತಮ್ಮ ಜೀವನ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಭಾರತೀಯ ಮಜ್ದೂರ್ ಸಂಘ ಸಂಯೋಜಿತ ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ವತಿಯಿಂದ ಬಂಟ್ವಾಳದಲ್ಲಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು ಹಾಗೂ ಮರಳಿನ ಅಭಾವದ ಸಮಸ್ಯೆಯನ್ನು ದ.ಕ.ಜಿಲ್ಲಾಧಿಕಾರಿಗಳು ಬಗೆಹರಿಸಿ ಕಟ್ಟಡ ಕಾರ್ಮಿಕರಿಗೆ ಜೀವನ ನಿರ್ವಹಿಸಲು ಅನುವು ಮಾಡಿಕೊಡುವಂತೆ ಒತ್ತಾಯಿಸಲಾಯಿತು.

ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತಕುಮಾರ ಮಣಿಹಳ್ಳ ಈ ಸಂದರ್ಭ ಮಾತನಾಡಿ, ರಾಜ್ಯ ಸರಕಾರವು ಸ್ಪಷ್ಟವಾದ ಕಾನೂನು ರೂಪಿಸದ ಕಾರಣ, ಕಾರ್ಮಿಕರು ಕೆಲಸವಿಲ್ಲದೆ ಕುಟುಂಬ ಪೋಷಣೆಗೂ ತೊಂದರೆ ಅನುಭವಿಸುವ ಸ್ಥಿತಿ ಹೊಂದಿದ್ದಾರೆ. ಸಾಲದ ಕಂತು ಪಾವತಿಸುವುದೂ ಸವಾಲಾಗಿದೆ, ಸರಕಾರ ಈ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ವಿಶ್ವನಾಥ್ ಚಂಡ್ತಿಮಾರ್, ಕಾರ್ಯದರ್ಶಿ ಶ್ರೀಕಾಂತ್ ಪಾಣೆಮಂಗಳೂರು, ಪ್ರಮುಖರಾದ ನಾರಾಯಣ ಶೆಟ್ಟಿ, ಸುರೇಶ್, ನವೀನ್, ಉಮಾಶಂಕರ್, ವಿಶ್ವನಾಥ್ ಕಲಾಯಿ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ದ.ಕ.ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿಯನ್ನು ತಹಸೀಲ್ದಾರ್ ಪರವಾಗಿ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು ಸ್ವೀಕರಿಸಿದರು.

Workers unemployed due to the lack of red stones and sand – BMS organized union demands to resolve the issue at BANTWAL

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal: ಕೆಂಪುಕಲ್ಲು, ಮರಳು ಅಭಾವದಿಂದ ಕೆಲಸವಿಲ್ಲದಂತಾದ ಕಾರ್ಮಿಕರು – ಸಮಸ್ಯೆ ಬಗೆಹರಿಸಲು ಬಿಎಂಎಸ್ ಸಂಯೋಜಿತ ಸಂಘಟನೆ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*