Thumbay: ಕಾವ್ಯ ಕೆ. ನಾಯಕ್ ಅವರಿಗೆ ಡಾಕ್ಟರೇಟ್

ಮಂಗಳೂರು: ತುಂಬೆಯ ಕಾವ್ಯ. ಕೆ. ನಾಯಕ್ ಅವರಿಗೆ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು, ದಿನಾಂಕ 11-07-2025 ರಂದು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕರಾದ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್ ಕಂಟಿನ್ಯುವಸ್ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ಸ್ ಫಾರ್ ಎಫೆಕ್ಟಿವ್ ಮ್ಯಾನೇಜ್ಮೆಂಟ್ ಆಫ್ ಡಯಾಬಿಟಿಸ್” ಎಂಬ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿದ್ದಾರೆ.

ಜಾಹೀರಾತು

ಈ ಮಹತ್ವದ ಸಂಶೋಧನೆ ಡಯಾಬಿಟಿಸ್ ನಿಖರ ನಿರ್ವಹಣೆಗೆ ಸಹಾಯ ಮಾಡುವ ಎಲೆಕ್ಟ್ರೋಕೆಮಿಕಲ್ ತಂತ್ರಜ್ಞಾನಾಧಾರಿತ ನಿರಂತರ ಗ್ಲುಕೋಸ್ ಮಾನಿಟರಿಂಗ್ ಸೆನ್ಸೋರ್ ಅಭಿವೃದ್ಧಿಯ ಬಗ್ಗೆ ಆಳವಾದ ಅಧ್ಯಯನವನ್ನು ಒಳಗೊಂಡಿದೆ.

ಡಾ. ಕಾವ್ಯ ಕೆ. ನಾಯಕ್ ಅವರು ತುಂಬೆಯ ಶ್ರೀಮತಿ ರೂಪ ಮತ್ತು ಶ್ರೀ ಕೆ. ಕೃಷ್ಣ ನಾಯಕ್ ದಂಪತಿಯ ಪುತ್ರಿಯಾಗಿದ್ದು, ಮಂದರ್ಕೆಯ ಗಿರೀಶ್ ಎನ್. ಪೈ ಅವರ ಧರ್ಮಪತ್ನಿಯಾಗಿದ್ದಾರೆ. ಪ್ರಸ್ತುತ ಅವರು ಬೆಂಗಳೂರು ನಗರದ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು

Be the first to comment on "Thumbay: ಕಾವ್ಯ ಕೆ. ನಾಯಕ್ ಅವರಿಗೆ ಡಾಕ್ಟರೇಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*