ಮಾಹಿತಿ

Mangalore: ವಿಕಲಚೇತನರಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆ: ಅರ್ಜಿ ಆಹ್ವಾನ

ಮಂಗಳೂರು:  2025-26ನೇ ಸಾಲಿನಲ್ಲಿ ಮಂಗಳೂರು, ಉಳ್ಳಾಲ ಹಾಗೂ ಮೂಡಬಿದಿರೆ ತಾಲೂಕಿನ ಪಂಚಾಯತ್‍ಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್‍ಗೆ ಒಬ್ಬರಂತೆ ಎಸ್.ಎಸ್.ಎಲ್.ಸಿಯಲ್ಲಿ ಪಾಸ್/ಫೇಲ್ ಆದ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಆರ್.ಡಬ್ಲ್ಯೂ)  ನೇಮಕ  ಮಾಡಲು ಅವಕಾಶವಿದ್ದು 18-45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಸಿಕ ಗೌರವಧನ ರೂ.10 ಸಾವಿರ ನೀಡಲಾಗುತ್ತದೆ.

ಜಾಹೀರಾತು

ಖಾಲಿ ಇರುವ ಹುದ್ದೆಗಳ ವಿವರ:-

ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಗ್ರಾಮ ಪಂಚಾಯತ್, ಮೂಡಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್, ಉಳ್ಳಾಲ ತಾಲೂಕಿನ ಅಂಬ್ಲಮೊಗರು, ಬೊಳಿಯಾರ್  ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿ.ಅರ್ ಡಬ್ಲ್ಯೂ)  ಹುದ್ದೆ ಖಾಲಿ ಇದ್ದು, ಆಸಕ್ತ ವಿಕಲಚೇತನರು ಆಗಸ್ಟ್ 12 ರೊಳಗೆ  ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಗೆ  ಮಂಗಳೂರು ಉರ್ವ ಮಾರ್ಕೆಟ್ ಬಿಲ್ಡಿಂಗ್‍ನ 3 ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಕಚೇರಿಯಿಂದ ಪಡೆದು ಅರ್ಜಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಮಂಗಳೂರು ತಾಲೂಕು ಪಂಚಾಯತ್ ಎಂ.ಆರ್.ಡಬ್ಲ್ಯೂ ಜಯಪ್ರಕಾಶ್ (ದೂರವಾಣಿ ಸಂಖ್ಯೆ 9110897458) ಸಂಪರ್ಕಿಸಬಹುದು ಎಂದು ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.