ಪ್ರಮುಖ ಸುದ್ದಿಗಳು

Dakshina Kannada: ಸೂರ್ಯಘರ್ ಯೋಜನೆ: ದಕ್ಷಿಣ ಕನ್ನಡ ಜಿಲ್ಲೆಯ 13 ಗ್ರಾಮಗಳ ಆಯ್ಕೆ

ಮಂಗಳೂರು:  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದರಿ ಸೋಲಾರ್ ಗ್ರಾಮವನ್ನು ಆಯ್ಕೆ ಮಾಡುವ ಸಲುವಾಗಿ ಜೂನ್ 27 ರಂದು ಜಿಲ್ಲಾ ಮಟ್ಟದ ಸಮಿತಿಯಿಂದ ನಡೆದ ಸಭೆಯಲ್ಲಿ 13 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ನೆಲ್ಯಾಡಿ, ಬೆಳ್ಳಾರೆ, ಕೆಯ್ಯೂರು, ಒಳಮೊಗ್ರು, ನರಿಮೊಗ್ರು, ಉಜಿರೆ, ನರಿಕೊಂಬು, ತೆಂಕಮಿಜಾರು, ಪುತ್ತಿಗೆ, ಬೆಳುವಾಯಿ, ಅಡ್ಡೂರು, ಮೂಳೂರು, ತಲಪಾಡಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಜಾಹೀರಾತು

 ಈ ಸಭೆಯಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಅಡಿಯಲ್ಲಿ ಸೋಲಾರ್ ಅಳವಡಿಸುವಂತೆ ಗ್ರಾಮ ಮಟ್ಟದಲ್ಲಿ ಜನರಿಗೆ ಉತ್ತೇಜನ ನೀಡುವಂತೆ ಸೂಚಿಸಲಾಗಿದೆ. ಸ್ಪರ್ಧೆಯ ಕಾಲಾವಧಿಯು ಜುಲೈ 1 ರಿಂದ ಡಿಸೆಂಬರ್ ಅಂತ್ಯದವರೆಗೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.

13 villages have been selected in a meeting held by the district level committee on June 27 to select a model solar village in Dakshina Kannada district under the ambitious scheme of the Central Government, the Pradhan Mantri Suryagarh Yojana.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

12 hours ago