ವಿಟ್ಲ

ಕೆಂಪುಕಲ್ಲು, ಮರಳಿನ ಅಭಾವ – ವಿಟ್ಲದಲ್ಲಿ ಮನವಿ ಅರ್ಪಿಸಿದ ಬಿಎಂಎಸ್ ಸಂಘಟನೆ

ಕೆಂಪುಕಲ್ಲು ಮತ್ತು ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸುತ್ತಿಲ್ಲ, ಇದರಿಂದ ಕಾರ್ಮಿಕರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿಟ್ಲದಲ್ಲಿ ಬಿಎಂಎಸ್ ವತಿಯಿಂದ ಉಪತಹಸೀಲ್ದಾರ್ ಅವರಿಗೆ ಮನವಿ ಅರ್ಪಿಸಲಾಯಿತು.

ಜಾಹೀರಾತು

OPTIC WORLD

 ವಿಟ್ಲ ಬಿಎಂಎಸ್ ನ ಅಧ್ಯಕ್ಷ ನಾಗೇಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕೆಲಿಂಜ ನೇತೃತ್ವ ವಹಿಸಿದ್ದರು. ಜಿಲ್ಲೆಯಲ್ಲಿ ತಲೆದೋರಿರುವ ಕೆಂಪುಕಲ್ಲು ಹಾಗೂ ಮರಳಿನ ಅಭಾವದ ಸಮಸ್ಯೆಯನ್ನು ದ.ಕ.ಜಿಲ್ಲಾಧಿಕಾರಿಗಳು ಬಗೆಹರಿಸಿ ಕಟ್ಟಡ ಕಾರ್ಮಿಕರಿಗೆ ಜೀವನ ನಿರ್ವಹಿಸಲು ಅನುವು ಮಾಡಿಕೊಡುವಂತೆ ಒತ್ತಾಯಿಸಲಾಯಿತು. ಈ ಸಂದರ್ಭ ಬಿಎಂಎಸ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾ‌ರ್ ಮಣಿಹಳ್ಳ, ಸಹಿತ ಪ್ರಮುಖರಾದ ಪರಮೇಶ್ವರ್,  ಸಂತೋಷ್ ಕೆಲಿಂಜ, ಪುಷ್ಪರಾಜ್ ಕೆಲಿಂಜ, ಶಿವಪ್ರಸಾದ್ ಕಟ್ಟೆ, ಅನಂತೇಶ್,  ಸಚ್ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.