ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಬಳಿಯ ಮುರತ್ತಮೇಲ್ ಎಂಬಲ್ಲಿ ಗುರುವಾರ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಜಾಹೀರಾತು
ಮುರತ್ತಮೇಲ್ ನಿವಾಸಿ ಬಾಲಕೃಷ್ಣ (60) ಮೃತಪಟ್ಟವರು. ಸೌತಡ್ಕ ದೇವಸ್ಥಾನದಿಂದ ಒಂದು ಕಿ.ಮೀ.ನಷ್ಟು ದೂರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗುರುವಾರ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆನೆಗಳು ಎರಗಿವೆ ಗುರುವಾರ ಸುಮಾರು ಬೆಳಿಗ್ಗೆ 11 ರಿಂದ 12 ಗಂಟೆಯ ಅವಧಿಯಲ್ಲಿ ಘಟನೆ ಸಂಭವಿಸಿದೆ. ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿರುತ್ತಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "Dakshina Kannada News: ಕಾಡಾನೆ ದಾಳಿಯಿಂದ ಓರ್ವ ಮೃತ್ಯು"
Be the first to comment on "Dakshina Kannada News: ಕಾಡಾನೆ ದಾಳಿಯಿಂದ ಓರ್ವ ಮೃತ್ಯು"