ಬಂಟ್ವಾಳ

ರೈತರ ಸಾಲ ಮನ್ನಾ ಹಣ ಅತಿಶೀಘ್ರವಾಗಿ ಬಿಡುಗಡೆ ಮಾಡಿ: ಪ್ರಭಾಕರ ಪ್ರಭು

ರೈತರ ಸಾಲ ಮನ್ನಾ ಹಣವನ್ನು ಅತೀ ಶೀಘ್ರವಾಗಿ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ದ ಅಧ್ಯಕ್ಷ ಪ್ರಭಾಕರ ಪ್ರಭು ಸಹಕಾರ ಸಚಿವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಅವರು ಕರ್ನಾಟಕ ಸರಕಾರದ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ನಿಬಂಧಕರಿಗೂ ಮನವಿ ಸಲ್ಲಿಸಿದ್ದಾರೆ.

ಜಾಹೀರಾತು

OPTIC WORLD

ಕರ್ನಾಟಕ ಸರಕಾರವು 2018-19 ನೇ ಸಾಲಿನಲ್ಲಿ ರೈತರು ಪಡೆದಿರುವ ಬೆಳೆ ಸಾಲಗಳ ಪೈಕಿ ಒಂದು ಲಕ್ಷವನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿತ್ತು .ಈ ಆದೇಶದಲ್ಲಿನ ನಿಯಾಮವಳಿಯಂತೆ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ಪಡೆದಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ಸಾಲ ಮನ್ನಾ ಯೋಜನೆಗೆ ಅರ್ಹರಾದ ಪೈಕಿ ಬಹುತೇಕ ರೈತರಿಗೆ ಸಾಲಮನ್ನಾ ಹಣವನ್ನು ಸರಕಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿರುತ್ತದೆ . ಈ ರೀತಿಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಯೋಜನೆಗೆ ಅರ್ಹವಾದ ಹಲವಾರು ರೈತರಿಗೆ ಸಾಲ ಮನ್ನಾ ಹಣ ಬಿಡುಗಡೆಯಾಗಿರುವುದಿಲ್ಲ . ಈ ಬಗ್ಗೆ ಸಾಲ ಮನ್ನಾ ಹಣ ಬಿಡುಗಡೆಯಾಗದೇ ಇರುವ ರೈತ ಸದಸ್ಯರೆಲ್ಲ ದಿನಂಪ್ರತಿ ಬಂದು ಪ್ರಾಥಮಿಕ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದು ಕೊಳ್ಳುತ್ತಿರುವ ಪ್ರಸಂಗಗಳು ಹಲವು ಕಡೆ ನಡೆಯುತ್ತಿರುತ್ತದೆ .ಸಾಲಮನ್ನಾ ಬಗೆಗಿನ ಹಣವನ್ನು ಸರಕಾರ ಬಿಡುಗಡೆ ಮಾಡದೇ ಸರಕಾರದ ಸಹಕಾರ ಇಲಾಖೆ ಮಾಡಿರುವ ಎಡವಟ್ಟಿಗೆ ಕೆಳಹಂತದಲ್ಲಿರುವ ಪ್ರಾಥಮಿಕ ಸಹಕಾರ ಸಂಘಗಳು ತನ್ನ ಸದಸ್ಯರಿಗೆ ಉತ್ತರಿಸಲಾಗದ ಪರಿಸ್ಥಿತಿ ಉದ್ಭವಿಸಿರುತ್ತದೆ ಎಂದವರು ಮನವಿಯಲ್ಲಿ ವಿವರಿಸಿದ್ದಾರೆ .

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

View Comments

  • Basavaraj Shivaputrappa Anikivi talluk bailhongale branch kvgb bank budarkatti Rs.2.50.000 bele sala date 22/04/2022 Sala maruphavati madilla kelau adachenegagi ega bele heni agide sala manna madabekendu vinantisuttene