ಜಿಲ್ಲಾ ಸುದ್ದಿ

ಬಂಟ್ವಾಳ ಪುರಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ಜನಾರ್ದನ ಚಂಡ್ತಿಮಾರ್ ಇನ್ನಿಲ್ಲ

OPTIC WORLD

ಬಂಟ್ವಾಳ: ಬಂಟ್ವಾಳ ಪುರಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಜನಾರ್ದನ ಚಂಡ್ತಿಮಾರ್ (55) ಸೋಮವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.  ಪತ್ನಿ, ಓರ್ವ ಪುತ್ರ ಸಹಿತ ಬಂಧು ಬಾಂಧವರನ್ನು ಅವರು ಅಗಲಿದ್ದಾರೆ.ಆದಿದ್ರಾವಿಡ ಸಮುದಾಯದ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಗುರುತಿಸಿಕೊಂಡಿದ್ದ ಚಂಡ್ತಿಮಾರ್, ಬಂಟ್ವಾಳ ಪುರಸಭೆಯ ಸದಸ್ಯರಾಗಿ ಶೋಷಿತರ ಪರ ಧ್ವನಿ ಎತ್ತುತ್ತಿದ್ದರು.

ಜಾಹೀರಾತು

ಜನಾರ್ದನ ಚೆಂಡ್ತಿಮಾರ್ ರವರ ಅಗಲುವಿಕೆಯು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಸಮುದಾಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಜಿಲ್ಲೆಯ ಒಬ್ಬ ಸಮುದಾಯ ಮತ್ತು ಪಕ್ಷವನ್ನು ಮುನ್ನಡೆಸುವ ಮುಖಂಡರನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲೆಂದು ಭಾವಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ತಮ್ಮ ಆಪ್ತ ಮುಖಂಡರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಂಡ್ತಿಮಾರ್ ನಿಧನಕ್ಕೆ ನಾನಾ ಮುಖಂಡರು, ಸಮುದಾಯದ ಗಣ್ಯರು, ಶೋಕ ವ್ಯಕ್ತಪಡಿಸಿದ್ದಾರೆ.

 

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.