ಜಿಲ್ಲಾ ಸುದ್ದಿ

Bantwal: ಶ್ರೀ ಕಾರಿಂಜೇಶ್ವರ ದೇವಸ್ಥಾನ ಜು.24ರಂದು ಆಟಿ ಅಮವಾಸ್ಯೆ ತೀರ್ಥಸ್ನಾನ

ಬಂಟ್ವಾಳ ತಾಲೂಕು ಪುರಾಣ ಪ್ರಸಿದ್ಧ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಜು.೨೪ರಂದು ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ಜರಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ.ವೀರೇಂದ್ರ ಅಮೀನ್ ಅವರು  ಪ್ರಕಟನೆಯಲ್ಲಿ ತಿಳಿಸಿದ್ದಾರೆ.

OPTIC WORLD

ಬೃಹತ್‌ಬಂಡೆಗಳಿಂದ ಆವೃತವಾದ ಗಿರಿಧಾಮದಲ್ಲಿರುವ ಆಕರ್ಷಣೀಯ,ಅತ್ಯಂತ ಪ್ರಾಚೀನ,ರಮ್ಯ ಈ ದೇವಸ್ಥಾನದ ದಕ್ಷಿಣ ಭಾಗದ ತಳದಲ್ಲಿರುವ ಗದಾತೀರ್ಥವೆಂಬ ಸರೋವರದಲ್ಲಿ  ಅನಾದಿ ಕಾಲದಿಂದಲೂ ಆರೋಗ್ಯ ಸಮೃದ್ಧಿಯ ಸಂದೇಶ ಸಾರುವ ಆಟಿ ಅಮಾವಾಸ್ಯೆಯಂದು ಭಕ್ತಾಽಗಳು ಹಾಗೂ ವಿಶೇಷವಾಗಿ ನವದಂಪತಿಗಳು ಇಲ್ಲಿ   ಪುಣ್ಯ ಸ್ನಾನಮಾಡಿ ಪಾರ್ವತಿ ಪರಮೇಶ್ವರರಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಈಡೇರಿಸಿಕೊಳ್ಳುವ ಸಂಪ್ರದಾಯವಿದೆ.

ಜಾಹೀರಾತು

ದೇವಸ್ಥಾನದಲ್ಲಿ ಅಮವಾಸ್ಯೆಯಂದು ಬೆಳಗ್ಗೆ ೩ ಗಂಟೆಯಿಂದ ಓಂಕಾರ ಫ್ರೆಂಡ್ಸ್ ಮಧ್ವ, ಓಂಕಾರ ಮಹಿಳಾ ಘಟಕ, ಓಂಕಾರ ಶ್ರೀ ಶಾರದಾ ಭಜನಾ ಮಂದಿರ ಬೆಂಗತ್ತೋಡಿ ಇವರ ವತಿಯಿಂದ ಆಟಿಯ ಅಮೃತ ಎಂದು ಬಣ್ಣಿಸಲಾದ ಹಾಳೆ ಮರದ ಕೆತ್ತೆಯ ಕಷಾಯ ವಿತರಣೆ ನಡೆಯಲಿದೆ. ಆ ದಿನ ವಿಶೇಷ ತೀರ್ಥಸ್ನಾನ ಹಾಗೂ ದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಭಕ್ತರು ಭಾಗವಹಿಸಿ ಶ್ರೀದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅವರು ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.