ಬಂಟ್ವಾಳ

ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ

ಬಿ  ಸಿ ರೋಡ್ — ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ಕ್ರೀಡಾ ಕೂಟ.ಶ್ರೀ ಸಾಯಿ ಕಿಡ್ ಝೋನ್ ವಿದ್ಯಾ ಸಂಸ್ಥೆಗಳು ಹಾಗೂ ರಕ್ಷಕ ಶಿಕ್ಷಕ ಸಂಘ ದ ಆಶ್ರಯದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ, ಹಳೇ ವಿದ್ಯಾರ್ಥಿ ಗಳಿಗೆ, ಪೋಷಕರಿಗೆ ಸಿಬ್ಬಂದಿ ವರ್ಗದವರಿಗೆ ಕೆಸರ್ಡ್ ಒಂಜಿ ದಿನ ಕೆಸರು ಗದ್ದೆ ಕ್ರೀಡಾಕೂಟ ಸ್ಪರ್ಶ ಕಲಾ ಮಂದಿರ ದ ಗದ್ದೆಯಲ್ಲಿ ನಡೆಯಿತು.

ಜಾಹೀರಾತು

ಶ್ರೀ ರಕ್ತೇಶ್ವರಿ ದೇವೀ ಸನ್ನಿಧಿಯ ಸೇವಾ ಸಮಿತಿ ಅಧ್ಯಕ್ಷ ರಾದ ಶ್ರೀ ವಿಶ್ವನಾಥ್ ಬಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈರಿಸಿದರು.ಮುಖ್ಯ ಅತಿಥಿಗಳಾದ ಶ್ರೀ ಸಂಜೀವ ಪೂಜಾರಿ ಗುರುಕೃಪ  ಬಿ ಸಿ ರೋಡ್ ಇವರು ತೆಂಗಿನ ಗರಿ ಅರಳಿಸಿ ಕ್ರೀಡಾ ಕೂಟ ಕ್ಕೆ ಶುಭ ಕೋರಿದರು.

ಮುಖ್ಯಾ ಅತಿಥಿ ಗಳಲ್ಲಿ ಓರ್ವರಾದ ಶ್ರೀ ಸುನೀಲ್ ಆಚಾರ್ಯ  ಅಪೂರ್ವ ಜ್ಯುವೆಲ್ಲರ್ಸ್ ಬಿ ಸಿ ರೋಡ್ ಗದ್ದೆಗೆ ಹಾಲು ಹಾಕುವ ಮುಖೇನ ಕ್ರೀಡಾ ಕೂಟಕ್ಕೆ ಯಶಸ್ಸನ್ನು ಕೋರಿದರು.ಗೌರವ ಅತಿಥಿಗಳಾಗಿ  ರಕ್ಷಕ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷರುಗಳಾದ ಶ್ರೀ ಮ್ಯಾಥ್ಯೂ ಫ್ರಾನ್ಸಿಸ್ ಡಿ ಕುನ್ಹಾ ,ಶ್ರೀಮತಿ ಸವಿತಾ ಅರುಣ್ ಪ್ರಕಾಶ್ ಮೊಡoಕಾಪು, ಶ್ರೀ ಅಭಿಲಾಶ್ ಭಟ್ , ಶ್ರೀ ಜ್ಞಾನೇಶ್ ರಾವ್,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ರಾದ ಶ್ರೀಮತಿ ತೇಜಸ್ವಿನಿ ಪೂಜಾರಿ ಯವರು ಕ್ರೀಡಾಕೂಟ ಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಸುಂದರ್ , ಕೋಶಾಧ್ಯಕ್ಷ ರಾದ ಶ್ರೀಮತಿ ಜಯಶ್ರೀ,ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರಾಜೇಶ್ ಅಮಿನ್  ಮತ್ತು ಶ್ರೀ ಅಶ್ರಿತ್ ಅಮೀನ್ ಹಾಗೂ ಸಂಸ್ಥೆಯ ಶಿಕ್ಷಕಿಯರು  ಉಪಸ್ಥಿತರಿದ್ದರು. ಶಾಲಾ ಸಂಚಾಲಕರಾದ ಶ್ರೀ ಐತಪ್ಪ ಪೂಜಾರಿ ಸ್ವಾಗತಿಸಿ  ಸದಸ್ಯರಾದ  ಶ್ರೀಮತಿ ಆರತಿ ಅಮೀನ್ ವಂದಿಸಿದರು.ಪೋಷಕರಾದ ಶ್ರೀಮತಿ ಸುಪ್ರೀತಾ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಸಂಸ್ಥೆಯ ಶಿಕ್ಷಕಿಯರು ಹಾಗೂ ಶಿಕ್ಷಕರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಗಳಿಂದ ನೃತ್ಯ ಪ್ರದರ್ಶನ ದೊಂದಿಗೆ ಕ್ರೀಡಾಕೂಟ ಕ್ಕೆ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಪೋಷಕರು ಸಹಕರಿಸಿದರು

OPTIC WORLD

CHESS TRAINING AT RAKTHESHWARI TEMPLE BCROAD

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.