ಪ್ರಮುಖ ಸುದ್ದಿಗಳು

ಸುರಿಯುವ ಮಳೆಯನ್ನೂ ಲೆಕ್ಕಿಸದೆ ಕಾರಿಂಜ, ನರಹರಿ ಪರ್ವತದಲ್ಲಿ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಆಗಮಿಸಿದ ಭಕ್ತರು

ಜಾಹೀರಾತು

ಆಟಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಸುರಿಯುವ ಮಳೆಯನ್ನು ಲೆಕ್ಕಿಸದೆ ನೂರಾರು ಮಂದಿ ಆಗಮಿಸಿ ತೀರ್ಥಸ್ನಾನ ಕೈಗೊಂಡರು.

ಇಲ್ಲಿನ ಶಂಖ, ಚಕ್ರ, ಗದಾ, ಪದ್ಮವೆಂಬ ನಾಲ್ಕು ಕೆರೆಗಳಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದರು. ಬೆಳಗ್ಗಿನಿಂದಲೇ ಸಾಲಾಗಿ ಭಕ್ತರು ಆಗಮಿಸುತ್ತಿದ್ದು, ಧಾರಾಕಾರ ಮಳೆಗೆ ಕೊಡೆ ಹಿಡಿದುಕೊಂಡೇ ಸಾಗಿದರು.

ನರಹರಿ ಪರ್ವತ ದೇವಸ್ಥಾನದಲ್ಲಿ ಡಾ. ಆತ್ಮರಂಜನ್ ರೈಯವರ ನೇತೃತ್ವದ ಜೀರ್ಣೋದ್ದಾರ ಸಮಿತಿ ಹಾಗೂ ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ ಮಾರ್ಲ ಹಾಗೂ ಆಡಳಿತ ಮಂಡಳಿ, ಸಕಲ ವ್ಯವಸ್ಥೆಗಳನ್ನು ಮಾಡಿತ್ತು. ಬಂಟ್ವಾಳ ಪೊಲೀಸರು ಮತ್ತು ಗೃಹರಕ್ಷಕ ದಳದ ವತಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಯಿತು.

ನಸುಕಿನ ವೇಳೆಯೇ ಭಕ್ತರ ಸಾಲು ಕಂಡುಬಂತು. ಆಟಿ ಅಮಾವಾಸ್ಯೆ ಸಂದರ್ಭ ಇಲ್ಲಿನ ಪುಣ್ಯತೀರ್ಥಗಳ ಪವಿತ್ರ ಜಲದಲ್ಲಿ ಸ್ನಾನ ಮಾಡಿದರೆ, ಸರ್ವರೋಗ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಅಸುಪಾಸಿನ ಪರವೂರಿನ ಭಕ್ತರು ಪರ್ವತವೇರಿ ಕೆರೆಗಳಲ್ಲಿ ಮಿಂದು ದೇವರ ಆಶೀರ್ವಾದ ಪಡೆದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.