ಬಂಟ್ವಾಳ

Siddakatte: ಸಿದ್ಧಕಟ್ಟೆ: ಯಕ್ಷಗಾನ ಕಲಾವಿದರಾದ ಸದಾಶಿವ ಶೆಟ್ಟಿಗಾರ್, ಪದ್ಮನಾಭ ಶೆಟ್ಟಿಗಾರ್ ಅವರಿಗೆ ನುಡಿನಮನ

ಬಂಟ್ವಾಳ: ಪ್ರಸಕ್ತ ನಗರವಾಗಿ ರೂಪುಗೊಳ್ಳುತ್ತಿರುವ ಗ್ರಾಮೀಣ ಪ್ರದೇಶ ಸಿದ್ದಕಟ್ಟೆ ಮತ್ತು ಯಕ್ಷಗಾನ ಕ್ಷೇತ್ರಕ್ಕೆ ಅವಿನಾಭಾವ ಸಂಬಂಧ ಇದೆ. ಇದರಿಂದಾಗಿ ಸದಾಶಿವ ಶೆಟ್ಟಿಗಾರ್ ಮತ್ತು ಪದ್ಮನಾಭ ಶೆಟ್ಟಿಗಾರ್ ಅವರಂಥ ಪ್ರಬುದ್ಧ ಕಲಾವಿದರು ಯಕ್ಷಗಾನ ಕ್ಷೇತ್ರದಲ್ಲಿ ಜನ ಮನ್ನಣೆ ಗಳಿಸಿದ್ದಾರೆ ಎಂದು ವಿಮರ್ಶಕ ಶಾಂತಾರಾಮ ಕುಡ್ವ ಹೇಳಿದರು.

ಜಾಹೀರಾತು

 ಇಲ್ಲಿನ ಸಿದ್ಧಕಟ್ಟೆ ಯಾಕ್ಷಾಭಿಮಾನಿಗಳು ಮತ್ತು ಪೂಂಜ ಯಕ್ಷ ಮಿತ್ರರು ವತಿಯಿಂದ ಸಿದ್ಧಕಟ್ಟೆ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ನಡೆದ ಹಿರಿಯ ಬಣ್ಣದ ವೇಷಧಾರಿ ದಿ.ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್, ಹಾಸ್ಯ ಕಲಾವಿದ ದಿ.ಪದ್ಮನಾಭ ಶೆಟ್ಟಿಗಾರ್ ಅವರ‌ ’ನುಡಿ ನಮನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

OPTIC WORLD

 ಕಲಾವಿದರಾದ ಸದಾಶಿವ ಶೆಟ್ಟಿ ಸಿದ್ಧಕಟ್ಟೆ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಜನಾರ್ದನ ಅಮುಂಜೆ ನುಡಿ ನಮನ ಸಲ್ಲಿಸಿದರು. ಸಂಗಬೆಟ್ಟು ವೀರಭದ್ರ ಮಹಮ್ಮಾಯಿ ದೇವಸ್ಥಾನ ಗುರಿಕಾರ ಚಂದ್ರಹಾಸ ಶೆಟ್ಟಿಗಾರ್, ಕೊಡಂಗೆ ಕಂಬಳ ಸಮಿತಿ ಅಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ, ಉದ್ಯಮಿ ಕಿರಣ್ ಕುಮಾರ್ ಮಂಜಿಲ, ಬಾಲಕೃಷ್ಣ ಶೆಟ್ಟಿಗಾರ್, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ, ರೋಟರಿ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಪ್ರಮುಖರಾದ ರತ್ನಕುಮಾರ್ ಚೌಟ, ಸೀತಾರಾಮ ಶೆಟ್ಟಿ ಅಂಗರಕುಮೇರು, ರಮೇಶ್ ಶೆಟ್ಟಿ ಮುಂಬೈ, ಗಣೇಶ ಶೆಟ್ಟಿ ಅರಳ, ವಕೀಲ ಸುರೇಶ ಶೆಟ್ಟಿ, ಜಗದೀಶ್ ಕೊಯಿಲ, ಹರಿಪ್ರಸಾದ್ ಭಟ್ ಹೋರಂಗಳ, ವಸಂತ ಶೆಟ್ಟಿ ಕೇದಗೆ, ಯಶೋಧರ ಶೆಟ್ಟಿ ದಂಡೆ, ಉಮೇಶ್ ಶೆಟ್ಟಿ ಕೊನೆರೋಟ್ಟು, ಸಂಘಟಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಶಶಿಧರ್ ಶೆಟ್ಟಿ ಕಲ್ಲಾಪು, ರಾಜೇಶ್ ಶೆಟ್ಟಿ ಕೊನೆರೊಟ್ಟು ಭಾಗವಹಿಸಿದ್ದರು.ರೋಟರಿ ಮಾಜಿ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಸ್ವಾಗತಿಸಿ, ಉಪನ್ಯಾಸಕ ಯೋಗೀಶ್ ಕೈರೋಡಿ ವಂದಿಸಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಗಣೇಶ ಶೆಟ್ಟಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.