MESCOM Bantwal: ಮೆಸ್ಕಾಂನಿಂದ ಬಂಟ್ವಾಳದಲ್ಲಿ ಜನಸಂಪರ್ಕ ಸಭೆ, ಅಹವಾಲು ಸ್ವೀಕಾರ

OPTIC WORLD

ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಬಂಟ್ವಾಳ ನಂ.೧, ೨ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಂಟ್ವಾಳದ ವಿಭಾಗೀಯ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ಆಗಮಿಸಿದ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಅಹವಾಲುಗಳನ್ನು ಆಲಿಸಿದರು. ಬಂಟ್ವಾಳ ಎಕ್ಸಿಕ್ಯುಟಿವ್ ಇಂಜಿನಿಯರ್ ವೆಂಕಟೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರುಗಳಾದ ನಾರಾಯಣ ಭಟ್  ಮತ್ತು ಸುಬ್ರಹ್ಮಣ್ಯ ಪ್ರಸಾದ್  ಉಪಸ್ಥಿತರಿದ್ದು, ಅಹವಾಲು ಗಳನ್ನು ಆಲಿಸಿದರು. ಸ್ಥಳದಲ್ಲಿ ಸುಮಾರು 12ಕ್ಕೂ ಅಧಿಕ ದೂರುಗಳು ಬಂದರೆ, ದೂರವಾಣಿ ಮೂಲಕವೂ ಅಹವಾಲುಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭ ಮಾತನಾಡಿದ ಕೃಷ್ಣರಾಜ್, ಗ್ರಾಹಕರು ಇಪ್ಪತ್ತು ರೂಪಾಯಿಗಳಿಗೆ ಬೇಕಾಗಿ ಕಚೇರಿಗೆ ಬರಬೇಕು ಎಂದಿಲ್ಲ, ಆನ್ಲೈನ್ ಪೇಮೆಂಟ್ ವ್ಯವಸ್ಥೆಯನ್ನು ಬಳಸಿಕೊಳ್ಳಿ, ಕ್ಯೂ ಆರ್ ಕೋಡ್ ಅನ್ನು ಉಪಯೋಗಿಸಿಕೊಳ್ಳಿ ಎಂದರು.

ಪವರ್ ಮ್ಯಾನ್ ಕೆಲಸದ ವೈಖರಿ, ಪವರ್ ಮ್ಯಾನ್ ಗಳಿಗೆ ಲ್ಯಾಡರ್ ಒದಗಿಸುವ ಕುರಿತು, ಹಳತಾದ ವಿದ್ಯುತ್ ತಂತಿಗಳು, ಸಣ್ಣ ಗಾಳಿಗೂ ಕರೆಂಟ್ ಹೋಗುವ ವಿಚಾರ ಹಾಗೂ ಮೀಟರ್ ರೀಡರ್ ಸಮಯಕ್ಕೆ ಸರಿಯಾಗಿ ಬಾರದ ವಿಚಾರ ಸಹಿತ ಅಧಿಕಾರಿಗಳ ಸ್ಪಂದನೆ ಹಾಗೂ ಐಪಿ ಸೆಟ್ ಗೆ ವಿದ್ಯುತ್ ಒದಗಿಸುವ ಬಗ್ಗೆ ಹಲವರು ತಮ್ಮ ಅಹವಾಲು ಮಂಡಿಸಿದರು. ಸಜೀಪಮೂಡ ಗ್ರಾಪಂ ಸದಸ್ಯ ಅಬ್ದುಲ್ ಕರೀಂ, ಅಮ್ಮುಂಜೆ ಗ್ರಾಮ  ಪಂಚಾಯತಿ ಉಪಾಧ್ಯಕ್ಷ ರಾಧಾಕೃಷ್ಣ ತಂತ್ರಿ  ನಾವೂರಿನ ಸುನಿಲ್ ಲೋಬೊ, ಸಮದ್, ಸ್ಟ್ಯಾನಿ ಜೆರಾಲ್ಡ್ ಸಿಕ್ವೇರಾ  ಮತ್ತಿತರರು ವಿಚಾರ ಮಂಡಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "MESCOM Bantwal: ಮೆಸ್ಕಾಂನಿಂದ ಬಂಟ್ವಾಳದಲ್ಲಿ ಜನಸಂಪರ್ಕ ಸಭೆ, ಅಹವಾಲು ಸ್ವೀಕಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*