Mangalore News: ಫ್ರಾನ್ಸ್ ನ ಗಾಳಿಪಟ ಜಾತ್ರೆಗೆ ಕುಡ್ಲದ ರಥ ಯಾತ್ರೆ

ಫ್ರಾನ್ಸ್ ದೇಶದಲ್ಲಿ ಸೆಪ್ಟೆಂಬರ್ 13 ರಿಂದ ಜರಗಲಿರುವ  ಜಗತ್ತಿನ ಅತೀ ದೊಡ್ಡ ಅಂತರಾಷ್ಟ್ರೀಯ  ಗಾಳಿಪಟ ಉತ್ಸವಕ್ಕೆ ಭಾರತದ ಪ್ರತಿನಿಧಿ ತಂಡವಾಗಿ ಮಂಗಳೂರಿನ ಸರ್ವೇಶ್ ರಾವ್ ನೇತ್ರತ್ವದ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಭಾಗವಹಿಸಲಿದೆ. ಟೀಮ್ ಮಂಗಳೂರು ತಂಡವು ಈಗಾಗಲೇ ಜಾಗತಿಕ ಮಟ್ಟದಲ್ಲಿ 12 ದೇಶಗಳ ಗಾಳಿಪಟ ಉತ್ಸವಗಳಲ್ಲಿ ಭಾರತದ ಸಾಂಸ್ಕೃತಿಕ ವಿಷಯಗಳನ್ನು ಗಾಳಿಪಟ ವಿನ್ಯಾಸವನ್ನಾಗಿ ಬ್ರಹತ್ ಗಾಳಿಪಟಗಳನ್ನು ರಚಿಸಿ ಫ್ರಾನ್ಸ್, ಇಂಗ್ಲೆಂಡ್, ಕೆನಡಾ, ಇಟೆಲಿ, ಕೊರಿಯಾ, ಹಾಂಗ್ ಕಾಂಗ್, ಇಂಡೋನೆಷ್ಯ, ಕತಾರ್, ದುಬೈ, ಶ್ರೀಲಂಕಾ ಮುಂತಾದ ದೇಶಗಳಲ್ಲಿ ಭಾಗವಹಿಸಿವೆ.

ಜಾಹೀರಾತು

ಈ ಸಲದ ಗಾಳಿಪಟ ಉತ್ಸವಕ್ಕೆ  ರಥದ  ವಿನ್ಯಾಸದ ಗಾಳಿಪಟ ಈಗ ತಯಾರಿಯಾಗುತ್ತಿದೆ. 18 ಅಡಿ ಎತ್ತರ 10 ಅಡಿ ಅಗಲದ ಈ ಗಾಳಿಪಟದ ಕಲಾ ವಿನ್ಯಾಸವನ್ನು ದಿನೇಶ್ ಹೊಳ್ಳ ಮಾಡಿದ್ದು ಗಾಳಿಪಟ ರಚನೆಯಲ್ಲಿ  ಪ್ರಾಣೇಶ್ ಕುದ್ರೋಳಿ, ಸತೀಶ್ ರಾವ್, ಅರುಣ್ ಸಹಕರಿಸುತ್ತಿದ್ದಾರೆ. ಗಾಳಿಪಟದ ಹೊಲಿಗೆಯನ್ನು ಸರ್ವೇಶ್ ರಾವ್ ಮಾಡುತ್ತಿದ್ದಾರೆ.

ಇಡೀ ಜಗತ್ತೇ ಇಂದು ನೀರಿನ ಬಗ್ಗೆ ಬರಗಾಲವನ್ನು ಅನುಭವಿಸುತ್ತಿದೆ. ‘ ನೀರು ಈ ಭುವಿಯ ಸಕಲ ಜೀವ ಸಂಕುಲಗಳ ಚೇತನಾ ಶಕ್ತಿ, ಪ್ರತೀ ನೀರಿನ ಹನಿಯೂ ತುಂಬಾ ಮಹತ್ವದ್ದು, ನೀರಿನ ಸಂರಕ್ಷಣೆಯ ಬಗ್ಗೆ ಪಲ್ಲಕ್ಕಿ ಯಲ್ಲಿ ನೀರಿನ ತಂಬಿಗೆಯನ್ನು ಇಟ್ಟು ನೀರು ಈ ಭುವಿಯ ಪ್ರತ್ಯಕ್ಷ ದೇವರು ಎಂಬಂತೆ ಇನ್ನೊಂದು ಗಾಳಿಪಟವನ್ನು ಮಾಡಲಾಗುತ್ತಿದೆ. ಇದರಲ್ಲಿ ಮೇಲೆ ಆಕಾಶ ಕೆಳಗೆ ಬೆಟ್ಟ ನಡುವೆ ನೀರಿನ ತಂಬಿಗೆ, ಬಾಲಂಗೋಚಿಯಲ್ಲಿ ಮರ, ಗಿಡಗಳ ಹಸಿರು ಹಂದರವನ್ನು ಕೆಳಗಡೆ ನೀರಿನ ಶೇಖರಣೆ ಯನ್ನು ( ಅಂದರೆ ಹಸಿರು ಪರಿಸರ ಇದ್ದರೆ ನೀರು ಸಹಜವಾಗಿಯೇ ಸಂಗ್ರಹವಾಗುತ್ತದೆ ಎಂಬ ಸಂದೇಶವನ್ನು ಸಾರಲಾಗಿದೆ. ರಿಪ್ ಸ್ಟಾಪ್ ನೈಲಾನ್ ಬಟ್ಟೆ ಯಿಂದ ಅಪ್ಲಿಕ್ ಮಾದರಿಯಲ್ಲಿ ಈ ಗಾಳಿಪಟವನ್ನು ತಯಾರಿಸಲಾಗುತ್ತಿದೆ.ಮಂಗಳೂರಿನ ಅಶೋಕ ನಗರದ ಸರ್ವೇಶ್ ರಾವ್ ರವರ ಮನೆಯಲ್ಲಿ ಈ ಗಾಳಿಪಟದ ತಯಾರಿ ಆಗುತ್ತಿದೆ

OPTIC WORLD

“Team Mangalore” kite team led by Sarvesh Rao from Mangalore will participate as India’s representative team in the world’s largest International kite festival to be held in France from September 13.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Mangalore News: ಫ್ರಾನ್ಸ್ ನ ಗಾಳಿಪಟ ಜಾತ್ರೆಗೆ ಕುಡ್ಲದ ರಥ ಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*