ಜಿಲ್ಲಾ ಸುದ್ದಿ

Mangalore Crime News: ನಿಷೇಧಿತ ಎಂಡಿಎಂಎ ಸಹಿತ ನಾಲ್ವರು ಡ್ರಗ್ ಪೆಡ್ಲರ್ ಗಳ ಬಂಧಿಸಿದ ಮಂಗಳೂರು ಪೊಲೀಸರು

ಮಾದಕ ವಸ್ತು ಮಾರಾಟ ಮಾಡುವವರ ಬೇಟೆಯನ್ನು ಮಂಗಳೂರು ನಗರ ಪೊಲೀಸರು ಮುಂದುವರಿಸಿದ್ದು, ಗುರುವಾರ ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು

ಉಡುಪಿ ಜಿಲ್ಲೆ ಉದ್ಯಾವರ ಗ್ರಾಮದ ದೇವರಾಜ್ ಪೂಜಾರಿ @ ದೇವು (38) ಉಡುಪಿ ಜಿಲ್ಲೆಯ ಕಾಪು ತಾಲೂಕು ಪಲಿಮಾರು ಗ್ರಾಮದ  ಜೀವನ್ ಅಮೀನ್ (32) ಮಂಗಳೂರು ಮೂಡುಶೆಡ್ಡೆಯ ಇಮ್ರಾನ್ (40), ಮಂಗಳೂರು ಅಶೋಕನಗರದ ಬಿ.ಮೊಹಮ್ಮದ್ ಹನೀಫ್ (56) ಬಂಧಿತ ಆರೋಪಿಗಳು ಇವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 44/2025 ರಲ್ಲಿ ಎನ್ .ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ.

ಸೆನ್ ಪೊಲೀಸ್ ಠಾಣೆಗೆ ಬಂದ ಮಾಹಿತಿಯ ಮೇರೆಗೆ  ಮಂಗಳೂರಿನ ನಗರದ ಬಂಗ್ರಕುಳೂರು ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿರುವ  ವೇಳೆಗೆ   ದಾಳಿ ಮಾಡಿದ ಪೊಲೀಸರು  ಆರೋಪಿತರಿಂದ 51 ಗ್ರಾಂ  ತೂಕದ ನಿಷೇಧಿತ ಮಾದಕ ವಸ್ತುವಾದ ಎಂ ಡಿ ಎಂ ಎ  ಯನ್ನು ವಶಪಡಿಸಿಕೊಂಡರು. ಜತೆಗೆ ಆರೋಪಿತರು ಕೃತ್ಯಕ್ಕೆ ಬಳಸಿದ 7 ಮೊಬೈಲ್ ಫೋನ್ ಗಳು, ಮಾರುತಿ  ಬೆಲೆನೂ, ಮಹೀಂದ್ರಾ ಸ್ಕಾರ್ಪಿಯೋ ಕಾರು, ನಗದು  ಹಣ  11,990  ರೂ ಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿ 1 ಗ್ರಾಂ ಎಂ ಡಿ ಎಂ ಎ ಗೆ ಅಂದಾಜು ಮೌಲ್ಯ 2,500 ರೂಗಳಗಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇವರಾಜ್ ಪೂಜಾರಿ @ ದೇವು ಎಂಬಾತನು  ಉಡುಪಿ, ಶಿವಮೊಗ್ಗ, ಮಂಗಳೂರು ನಗರದಲ್ಲಿ  ಮಾದಕ ವಸ್ತುವಾದ ಎಂ ಡಿ ಎಂ ಎ ಯನ್ನು  ಮಾರಾಟ (ಪೆಡ್ಲರ್) ಮಾಡುವವರಾಗಿರುತ್ತಾನೆ ಹಾಗೂ ಉಳಿದ 03 ಜನ ಆರೋಪಿತರು  ಮಂಗಳೂರು ನಗರದಲ್ಲಿ ಎಂ ಡಿ ಎಂ ಎ ಯನ್ನು  ಮಾರಾಟ (ಪೆಡ್ಲರ್) ಮಾಡುವವರಾಗಿರುತ್ತಾರೆ.

ಎಂ ಡಿ ಎಂ ಎ ಯನ್ನು  ಚಿಕ್ಕ ಚಿಕ್ಕ ಪ್ಯಾಕೇಟ್ ಗಳ್ಲಲಿ  ಪ್ಯಾಕ್ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ತನಿಖೆಯ ವೇಳೆ ಕಂಡುಬಂದಿದ್ದು, ತನಿಖೆ ಮುಂದುವರೆದಿದೆ.ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ  ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು  ಸಿಬ್ಬಂದಿರವರು ಭಾಗವಹಿಸಿರುತ್ತಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.