OPTIC WORLD
ಶೈಕ್ಷಣಿಕವಾಗಿ ನಾಲ್ಕು ದಶಕಗಳಿಂದ ಕರಾವಳಿಯ ಸಮುದಾಯದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದಂತಹ ಹಾಗೂ ಶಿಕ್ಷಣದ ಸಬಲೀಕರಣಕ್ಕಾಗಿ ಕೆಲಸ ಮಾಡಿದ ಪ್ರಶಂಸೆಗೆ ಜಮೀಯ್ಯತಲ್ ಫಲಾಹ್ ಸಂಸ್ಥೆ ಪಾತ್ರವಾಗಿದೆ. ಇದನ್ನು ಉಳಿಸಿ ಬೆಳೆಸುವಲ್ಲಿ ಸಂಸ್ಥೆಯ ಬಂಟ್ವಾಳ ಘಟಕ ಶಿಕ್ಷಣದ ಜೊತೆಗೆ ಕೈಂಕರ್ಯದಲ್ಲಿ ತೊಡಗಿಸಿಕೊಂಡು ಸಂಸ್ಥೆಯ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿರುವುದು ಸ್ತುತ್ಯರ್ಹ ಎಂದು ಜಮೀಯ್ಯತುಲ್ ಫಲಾಹ್ ಕೇಂದ್ರೀಯ ಘಟಕದ ಕೋಶಾಧಿಕಾರಿ ಎಡ್ವಕೇಟ್ ಕೆ.ಎಂ. ಸಿದ್ದೀಕ್ ಪುತ್ತೂರು ಹೇಳಿದರು.
ಬಂಟ್ವಾಳ ಲಯನ್ಸ್ ಭವನದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ವತಿಯಿಂದ ನಡೆದ ಮೆಲುಕು – 2022-25 ಹಾಗೂ ಮಹಾಸಭೆಯ ವೀಕ್ಷಕರಾಗಿ ಆಗಮಿಸಿ 37 ವರ್ಷದ ಇತಿಹಾಸವಿರುವ ಚೈತನ್ಯ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಘಟಕದ ಅಧ್ಯಕ್ಷ ರಶೀದ್ ವಿಟ್ಲ ಅವರು ಒಗ್ಗಟ್ಟಿನಿಂದ ಮಾನವೀಯ ಸೇವೆಗೈದರೆ ಸಂತೃಪ್ತಿ ಪ್ರಾಪ್ತವಾಗುತ್ತದೆ. ಜಿಲ್ಲೆಗೆ ಮಾದರಿಯಾಗಿರುವ ನಮ್ಮ ಸಂಸ್ಥೆ ಕರಾವಳಿಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪ್ರಮುಖ ನೇತೃತ್ವ ನೀಡಿದೆ ಎಂದರು.
ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವಾರ್ಷಿಕ ವರದಿ ಮಂಡಿಸಿದರು. ಘಟಕದ ಕೋಶಾಧಿಕಾರಿ ಎಂ.ಎಚ್. ಇಕ್ಬಾಲ್ ಲೆಕ್ಕಪತ್ರ ಮಂಡಿಸಿದರು. ವೀಕ್ಷಕರಾದ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಹಮ್ಮದ್ ಬಪ್ಪಳಿಗೆ, ಜಿಲ್ಲಾ ಕಾರ್ಯದರ್ಶಿ ಶೇಖ್ ಅಬ್ದುಲ್ ಗಫೂರ್ ವೇದಿಕೆಯಲ್ಲಿದ್ದರು. ನಿರ್ಗಮನ ಅಧ್ಯಕ್ಷ ರಶೀದ್ ವಿಟ್ಲ ಸಹಕರಿಸಿದ ಸದಸ್ಯರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಅಬ್ದುಲ್ ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಲತೀಫ್ ನೇರಳಕಟ್ಟೆ ಸ್ವಾಗತಿಸಿದರು. ಅಬೂಬಕರ್ ನೋಟರಿ ಕಿರಾಅತ್ ಪಠಿಸಿದರು.
ನೂತನ ಪದಾಧಿಕಾರಿಗಳ ಆಯ್ಕೆ:
2025-27 ನೇ ಸಾಲಿಗೆ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಬಿ.ಎಂ. ಅಬ್ಬಾಸ್ ಅಲಿ ಬೋಳಂತೂರು, ಕಾರ್ಯದರ್ಶಿಯಾಗಿ ಹಕೀಮ್ ಕಲಾಯಿ, ಕೋಶಾಧಿಕಾರಿಯಾಗಿ ರಶೀದ್ ವಿಟ್ಲ, ಉಪಾಧ್ಯಕ್ಷರಾಗಿ ಆಸಿಫ್ ಇಕ್ಬಾಲ್, ಬಿ.ಎಂ. ತುಂಬೆ, ಜೊತೆ ಕಾರ್ಯದರ್ಶಿಯಾಗಿ ಕೆ.ಎಸ್. ಮಹಮ್ಮದ್ ಗಡಿಯಾರ, ಸಂಘಟನಾ ಕಾರ್ಯದರ್ಶಿ ಶೇಖ್ ರಹ್ಮತುಲ್ಲಾ, ಪತ್ರಿಕಾ ಕಾರ್ಯದರ್ಶಿಯಾಗಿ ಆಶಿಕ್ ಕುಕ್ಕಾಜೆ, ಕಾರ್ಯಕಾರೀ ಸಮಿತಿ ಸದಸ್ಯರಾಗಿ ಕೆ.ಕೆ. ಶಾಹುಲ್ ಹಮೀದ್, ಎಂ.ಎಚ್. ಇಕ್ಬಾಲ್, ಲತೀಫ್ ನೇರಳಕಟ್ಟೆ, ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಅಬೂಬಕರ್ ವಿಟ್ಲ, ಎಫ್.ಎಂ. ಬಶೀರ್, ಅಬ್ದುಲ್ ರಝಾಕ್ ಅನಂತಾಡಿ, ರಫೀಕ್ ಹಾಜಿ ತೌಫೀಕ್, ಮಹಮ್ಮದ್ ನಾರಂಕೋಡಿ, ಪಿ. ಮಹಮ್ಮದ್ ಪಾಣೆಮಂಗಳೂರು, ಹಂಝ ಬಸ್ತಿಕೋಡಿ, ವಿ.ಎಚ್. ಅಶ್ರಫ್ ವಿಟ್ಲ, ಮಹಮ್ಮದ್ ಸಾಗರ್ ಆಯ್ಕೆಯಾದರು