Bantwal Jain Milan: ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್

ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ವತಿಯಿಂದ ಜೈನ್ ಮಿಲನ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮ ಭಾನುವಾರ ಸಂಜೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಿತು.

ಜಾಹೀರಾತು

ಸುಮಾರು 65ಕ್ಕೂ ಅಧಿಕ ಬಗೆಯ ಆಟಿಯ ಖಾದ್ಯಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಸಭಾ ಕಾರ್ಯಕ್ರಮದ ಬಳಿಕ ಅತಿಥಿಗಳು ಹಾಗೂ ಜೈನಬಾಂಧವರು ಆಟಿಡೊರ ತಮ್ಮನದ ಲೇಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಭಾರತೀಯ ಜೈನ್ ಮಿಲನ್ ವಲಯ 8ರ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಪುಷ್ಪರಾಜ್ ಜೈನ್ ಉದ್ಘಾಟಿಸಿದರು.

ಪದಪ್ರದಾನದ ಪೌರೋಹಿತ್ಯವನ್ನು ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ಸುದರ್ಶನ ಜೈನ್ ಪಂಜಿಕಲ್ಲು ವಹಿಸಿದ್ದರು.

ಅಧ್ಯಕ್ಷತೆಯನ್ನು ಜೈನ್ ಮಿಲನ್ ಬಂಟ್ವಾಳ ಅಧ್ಯಕ್ಷ ಮಧ್ವರಾಜ್ ಜೈನ್ ಪಂಜಾಲು ವಹಿಸಿದ್ದರು. ನೂತನ ಸಾಲಿನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಾಜೇಂದ್ರ ಜೈನ್, ಕಾರ್ಯದರ್ಶಿಯಾಗಿ ಜಯಕೀರ್ತಿ ವೈ.ಎಸ್., ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಬಸ್ತಿಪಡ್ಪು, ಉಪಾಧ್ಯಕ್ಷರಾಗಿ ತೇಜ್ ಪಾಲ್ ಜೈನ್, ಡಾ. ಸೀಮಾ ಸುದೀಪ್, ಅರ್ಕಕೀರ್ತಿ ಹೆಗ್ಡೆ, ಹರ್ಷರಾಜ್ ಬಲ್ಲಾಳ್, ವಿನಯಚಂದ್ರ ಜೈನ್, ಜೊತೆ ಕಾರ್ಯದರ್ಶಿಗಳಾಗಿ ಹರ್ಷೇಂದ್ರ ಹೆಗ್ಡೆ, ಸಂಧ್ಯಾ ಸಿದ್ಧಕಟ್ಟೆ, ಚಂದನಾ ಬೃಜೇಶ್, ಸಂಘಟನಾ ಕಾರ್ಯದರ್ಶಿಯಾಗಿ ಸನ್ಮತಿ ಜಯಕೀರ್ತಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಉದಯಕುಮಾರ್, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೇಯಾಂಸ್ ಜೈನ್ ಸಹಿತ ಸಂಚಾಲಕರ ತಂಡ, ಕಾರ್ಯಕಾರಿ ಸಮಿತಿಯ ಅಧಿಕಾರ ಸ್ವೀಕರಿಸಿತು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಜೈನರು ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುವುದರ ಮೂಲಕ ಗೌರವಾನ್ವಿತ ಸ್ಥಾನಮಾನದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶುಭ ಹಾರೈಸಿದರು.

 

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರ್ವ ಸಮಾಜದ ಪ್ರೀತಿಗೆ ಮಾನ್ಯರಾದ ಜೈನರು ಸಾಮಾಜಿಕವಾಗಿ ಗೌರವಾನ್ವಿತರಾದ ಸ್ಥಾನದಲ್ಲಿದ್ದಾರೆ. ಜೈನ ಆಹಾರ ಪದ್ಧತಿಯಿಂದ ತೊಡಗಿ, ಮುನಿಗಳು ನೀಡಿದ ಸಂದೇಶಗಳು ಪ್ರಸ್ತುತವಾಗಿವೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಅಶೋಕ್ ಜೈನ್ ಮಾತನಾಡಿ, ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬ ಕುರಿತು ವಿವರಿಸಿದರು.ಈ ಸಂದರ್ಭ ಹಿರಿಯರನ್ನು ಗೌರವಿಸಲಾಯಿತು

OPTIC WORLD

ನೂತನ ಅಧ್ಯಕ್ಷ ರಾಜೇಂದ್ರ ಜೈನ್ ಮುಂದಿನ ಯೋಜನೆಗಳ ಕುರಿತು ವಿವರಿಸಿದರು. ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ನಿರ್ದೇಶಕ ಪ್ರಮೋದ್ ಕುಮಾರ್ ವೇಣೂರು ಶುಭ ಹಾರೈಸಿದರು. ಮಂಗಳೂರು ವಿಭಾಗ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜಯಕೀರ್ತಿ ವೈ.ಎಸ್. ವಂದಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "Bantwal Jain Milan: ಭಾರತೀಯ ಜೈನ್ ಮಿಲನ್ ಬಂಟ್ವಾಳ ಘಟಕ ಪದಗ್ರಹಣ, ಆಟಿಡೊರ ತಮ್ಮನದ ಲೇಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*