ಬಂಟ್ವಾಳ

Bantwal: ಆ.28ರಂದು ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ – Details

ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಕಾರ್ಯಕ್ರಮ ಆಗಸ್ಟ್ 28ರಂದು ಗುರುವಾರ ಏರ್ಯಬೀಡಿನಲ್ಲಿ ಅಪರಾಹ್ನ 4 ಗಂಟೆಗೆ ನಡೆಯಲಿದೆ ಎಂದು ಏರ್ಯ ಆಳ್ವ ಫೌಂಡೇಶನ್ ಪ್ರಕಟಣೆ ತಿಳಿಸಿದೆ.

OPTIC WORLD

ಜಾಹೀರಾತು

ಆನಂದಿ ಎಲ್. ಆಳ್ವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಡಾ. ನಾ.ದಾಮೋದರ ಶೆಟ್ಟಿ ಸಂಪಾದಿತ ಏರ್ಯ ಸಾಹಿತ್ಯ ಮರುಚಿಂತನ ಕೃತಿಯ ಅನಾವರಣ ಪ್ರೊ.ಬಿ.ಎ.ವಿವೇಕ್ ರೈ ಅವರಿಂದ ಬಿಡುಗಡೆಯಾಗಲಿದೆ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಪ್ರಶಸ್ತಿಯನ್ನು ಡಾ. ಕೆ.ಚಿನ್ನಪ್ಪ ಗೌಡ ಮತ್ತು ಡಾ. ನಾ.ದಾಮೋದರ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುವುದು. ಏರ್ಯ ಬಾಲಕೃಷ್ಣ ಹೆಗ್ಡೆ ಉಪಸ್ಥಿತರಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡೋಜ ಡಾ. ಹಂಪ ನಾಗರಾಜಯ್ಯ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.