ಕಲ್ಲಡ್ಕ

Narahari: ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ಸಹಾಯಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ  5  ಲಕ್ಷ ರೂಪಾಯಿ  ಮಂಜೂರಾಗಿದ್ದು, ಸೋಮವಾರ  ನರಹರಿ ಪರ್ವತ ಸದಾಶಿವ ದೇವಸ್ಥಾನ ದ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರ ಮಾಡಲಾಯಿತು.

ಜಾಹೀರಾತು

ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ, ಧರ್ಮಸ್ಥಳದಿಂದ  ಎಲ್ಲಾ ಕ್ಷೇತ್ರಗಳಿಗೂ ಸಹಾಯಧನ ನೀಡಲಾಗುತ್ತಿದ್ದು ಅದರಂತೆ ನರಹರಿ ಪರ್ವತಕ್ಕೂ ದೊಡ್ಡ ಮೊತ್ತದ ಸಹಾಯದನ ನೀಡಲಾಗಿದೆ ಎಂದರು.

OPTIC WORLD

ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಕಲ್ಲಡ್ಕ ವಲಯ ಮೇಲ್ವಿಚಾರಕ ಸುಕರಾಜ್, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ಮಾಣಿ ಉಳ್ಳಾಲ್ಟಿ ದೇವಸ್ಥಾನದ  ಶೇಖರ ಪೂಜಾರಿ, ನರಹರಿ ಪರ್ವತ ಜೀರ್ಣೋದರ ಸಮಿತಿಯ ಅಧ್ಯಕ್ಷ ಡಾ. ಆತ್ಮ ರಂಜನ್ ರೈ, ದೇವಸ್ಥಾನದ ಪ್ರಧಾನ ಅರ್ಚಕರಾದ ಪರಮೇಶ್ವರ ಮಯ್ಯ, ನರಹರಿ ಪರ್ವತ ದೇವಸ್ಥಾನದ ದೇವಸ್ಥಾನ ವ್ಯವಸ್ಥಾಪನ  ಸಮಿತಿಯ ಸದಸ್ಯರುಗಳಾದ ಎಂ ಎನ್ ಕುಮಾರ್, ಕೃಷ್ಣ ನಾಯಕ್, ಮಾಧವ ಶೆಣೈ, ಪ್ರತಿಭಾ ಏ ರೈ, ಶ್ರೀಧರ ಶೆಟ್ಟಿ  ಬೊಂಡಾಲ,  ಜೀರ್ಣೋದ್ದಾರ ಸಮಿತಿಯ ಸದಸ್ಯರಾದ ಶಂಕರ ಆಚಾರ್ಯ, ಕಿಶೋರ್, ಶಂಕರ ಐತಾಳ್, ಸತೀಶ್ ಪಿ ಸಾಲಿಯಾನ್, ಓಂ ಪ್ರಕಾಶ್,  ಬೋಳಂತೂರು ಒಕ್ಕೂಟ ಅಧ್ಯಕ್ಷ ಸೀತಾ, ಕಲ್ಲಡ್ಕ ಶೌರ್ಯ ವಿಪತ್ತು ಘಟಕ  ಅಧ್ಯಕ್ಷ ಮಾಧವ ಸಾಲಿಯಾನ್, ಸಂಯೋಜಕಿ ವಿದ್ಯಾ  ಸದಸ್ಯರುಗಳಾದ ಗಣೇಶ್ ನೆಟ್ಲಾ, ರಮೇಶ್ ಕುದ್ರೆಬೆಟ್ಟು, ಚಿನ್ನಾ ಕಲ್ಲಡ್ಕ, ರವಿಚಂದ್ರ, ಧನಂಜಯ, ಸಂತೋಷ್, ಮೊದಲಾದವರು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.