ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಆಧ್ಯಕ್ಷರಾಗಿ ಸಾಹಿತಿ ವಿಂಧ್ಯಾ ಎಸ್. ರೈ ಕಡೇಶಿವಾಲಯ ಆಯ್ಕೆಗೊಂಡಿದ್ದಾರೆ.
ಮೂಡುಬಿದಿರೆಯಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಆಮಂತ್ರಣ ಪರಿವಾರದ ಜಿಲ್ಲಾಧ್ಯಕ್ಷರಾದ ನಿರೀಕ್ಷತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಜಯಕುಮಾರ್ ಜೈನ್ ಎಲ್ಲರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ನೂತನ ಸಮಿತಿ ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಸಾಹಿತಿ ವಿಂಧ್ಯಾ ಎಸ್ ರೈ ಕಡೇಶಿವಾಲಯ, ನೂತನ ಉಪಾಧ್ಯಕ್ಷರಾಗಿ ಉಪನ್ಯಾಸಕಿ ಹಾಗೂ ಸಾಹಿತಿ ಅನಿತಾ ಶೆಟ್ಟಿ ಮೂಡಬಿದ್ರೆ ಆಯ್ಕೆಯಾಗಿದ್ದಾರೆ. ರಾಜ್ಯ ಪ್ರತಿನಿಧಿಗಳಾದ ಎಚ್ಕೆ ನಯನಾಡು, ಆಶಾ ಅಡೂರು, ಭಾರತಿ ಪರ್ಕಳ, ಜಿಲ್ಲಾ ನಿರ್ದೇಶಕರಾದ ಚೇತನ್ ಕುಮಾರ್ ಅಮೈ, ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು, ಬಂಟ್ವಾಳ ತಾಲೂಕು ಅಧ್ಯಕ್ಷೆ ರಶ್ಮಿತಾ ಸುರೇಶ್ ಜೋಗಿಬೆಟ್ಟು,ಮೂಡಬಿದ್ರೆ ತಾಲೂಕು ಅಧ್ಯಕ್ಷೆ ಕವಿತಾ ದಿನೇಶ್ ಕಟೀಲ್, ಕಾರ್ಯದರ್ಶಿ ಸುಶ್ಮಿತಾ ಆರ್, ಲೋಲಾಕ್ಷಿ ಶೆಟ್ಟಿ, ಪ್ರಕಾಶ್ ಆಚಾರ್ಯ, ಬಂಟ್ವಾಳ ಘಟಕದ ರೂಪೇಶ್ ಕುಮಾರ್,ರಾಕೇಶ್ ಪೊಳಲಿ, ಪ್ರಸಾದ್ ನಾಯಕ್ ಕಾರ್ಕಳ, ವಿಜಯಚಂದ್ರ ಮುಂಡ್ಲಿ, ಅನ್ನಪೂರ್ಣ ಶ್ಯಾನುಭೋಗ್ ಅಂಬಲಪಾಡಿ, ಅಕ್ಷತಾ ಅಡೂರು, ಸರೀನ್ ತಾಜ್ ಕಾಶಿಪಟ್ಣ, ದೀಕ್ಷಾ ಕಾಶಿಪಟ್ಣ ಭಾಗವಹಿಸಿದ್ದರು

OPTIC WORLD


Be the first to comment on "ಆಮಂತ್ರಣ ವೇದಿಕೆ ದ. ಕ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಆಯ್ಕೆ"