
OPTIC WORLD
ಬಂಟ್ವಾಳ ತಾಲೂಕಿನಾದ್ಯಂತ ಬೀದಿ ನಾಯಿಗಳ ಹಾವಳಿ ತಡೆಗಟ್ಟಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬಂಟ್ವಾಳ ತಹಸೀಲ್ದಾರ್ ಅವರಿಗೆ ಎಸ್.ಡಿ.ಪಿ.ಐ. ನಿಯೋಗ ಮನವಿ ಸಲ್ಲಿಸಿದೆ.

ಬಂಟ್ವಾಳ ತಾಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು,ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು ಹಾಗೂ ಹಿರಿಯ ನಾಗರಿಕರು ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆಯೂ, ಸಾರ್ವಜನಿಕರಿಗೆ ಗರಿಷ್ಟ ಭದ್ರತೆ ಒದಗಿಸುವಂತೆಯೂ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ನೇತೃತ್ವದ ನಿಯೋಗದಿಂದ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ನಿಯೋಗದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ, ಉಪಾಧ್ಯಕ್ಷ ಇಕ್ಬಾಲ್ ಇಝಾನ್, ಕಾರ್ಯದರ್ಶಿ ಕಬೀರ್ ಅಕ್ಕರಂಗಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು ಹಾಗೂ ಬಿ ಸಿ ರೋಡ್ ಸಿಟಿ ಕೌನ್ಸಿಲ್ ಅಧ್ಯಕ್ಷರಾದ ಬಶೀರ್ ಪಲ್ಲ ಉಪಸ್ಥಿತರಿದ್ದರು


Be the first to comment on "Bantwal SDPI: ಬೀದಿನಾಯಿಗಳಿಂದ ಸಾರ್ವಜನಿಕರಿಗೆ ತೊಂದರೆ: ತಹಸೀಲ್ದಾರ್ ಗೆ ಮನವಿ ಸಲ್ಲಿಸಿದ ಎಸ್.ಡಿ.ಪಿ.ಐ. ನಿಯೋಗ"