ಬಂಟ್ವಾಳ

ಬಂಟ್ವಾಳ: ಜಮೀಯ್ಯತುಲ್ ಫಲಾಹ್ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ

OPTIC WORLD

ಜಾಹೀರಾತು

ಬಂಟ್ವಾಳ: ಜಮೀಯ್ಯತಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಮೆಲ್ಕಾರ್ ನ ಸಂಸ್ಥೆಯ ನೂತನ ಕಚೇರಿಯಲ್ಲಿ ನಡೆಯಿತು.

ಸಂಸ್ಥೆಯ ಅಧ್ಯಕ್ಷ ರಶೀದ್ ವಿಟ್ಲ ಅದ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ  ವೀಕ್ಷಕರಾಗಿ ಭಾಗವಹಿಸಿದ್ದ ಜಮೀಯ್ಯತುಲ್ ಫಲಾಹ್ ಕೇಂದ್ರೀಯ ಘಟಕದ ಕೋಶಾಧಿಕಾರಿ ನ್ಯಾಯವಾದಿ ಕೆ.ಎಂ.ಸಿದ್ದೀಕ್ ಪುತ್ತೂರು ಹಾಗೂ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಹಮ್ಮದ್ ಬಪ್ಪಳಿಗೆ 2025-27 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟಿದ್ದರು.

ನಿರ್ಗಮನ ಅಧ್ಯಕ್ಷ ರಶೀದ್ ವಿಟ್ಲ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಎಂ.ಅಬ್ಬಾಸ್ ಅಲಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ನೂತನ ಕಾರ್ಯದರ್ಶಿ ಹಕೀಂ ಕಲಾಯಿ ಹಾಗೂ ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಅವರಿಗೆ ಜವಾಬ್ದಾರಿ ವಹಿಸಿಕೊಡಲಾಯಿತು.

ಈ ಸಂದರ್ಭ ನಿರ್ಗಮನ ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್ ಮೆಲ್ಕಾರ್, ನೂತನ  ಉಪಾಧ್ಯಕ್ಷರಾದ ಆಸಿಫ್ ಇಕ್ಬಾಲ್ ಕುಂಪನಮಜಲು, ಬಿ.ಎಂ.ತುಂಬೆ, ಜೊತೆ ಕಾರ್ಯದರ್ಶಿ ಕೆ.ಎಸ್. ಮಹಮ್ಮದ್ ಕಡೇಶ್ವಾಲ್ಯ,   ಸಂಘಟನಾ ಕಾರ್ಯದರ್ಶಿ ಶೇಖ್ ರಹ್ಮತುಲ್ಲಾ ಕಾವಳಕಟ್ಟೆ, ಪತ್ರಿಕಾ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಕಾರ್ಯಕಾರೀ ಸಮಿತಿ ಸದಸ್ಯರಾದ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಎಫ್.ಎಂ. ಬಶೀರ್ ಫರಂಗಿಪೇಟೆ, ರಫೀಕ್ ಹಾಜಿ ಆಲಡ್ಕ , ನೋಟರಿ ಅಬೂಬಕರ್ ವಿಟ್ಲ,  ಅಬ್ದುಲ್ ರಝಾಕ್ ಅನಂತಾಡಿ, ಮಹಮ್ಮದ್ ನಾರಂಕೋಡಿ, ಪಿ.ಮಹಮ್ಮದ್ ಪಾಣೆಮಂಗಳೂರು, ಆನಿಯಾ ದರ್ಬಾರ್ ಹಂಝ ಬಸ್ತಿಕೋಡಿ, ವಿ.ಎಚ್.ಅಶ್ರಫ್ ವಿಟ್ಲ, ಸಾಗರ್ ಮಹಮ್ಮದ್ ಪರ್ಲಿಯ ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

6 hours ago